ಸಿರಿಧಾನ್ಯ ಸೇರಿದಂತೆ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಕ್ತಿವರ್ಧಕ ಆಹಾರ ಸಾಮಗ್ರಿಗಳಿರುವ ಕಿಟ್ ಅನ್ನು ಅಜಿತ ಮನೋಚೇತನಾ ಸಂಸ್ಥೆಯ ಪದಾಧಿಕಾರಿಗಳು ಪಾಲಕರಿಗೆ ವಿತರಿಸಿದರು. ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಅವರು, ಉತ್ತರ ಕನ್ನಡ ಜಿಲ್ಲೆ ಕೊರೊನಾದಿಂದ ಮುಕವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಎದ್ದುನಿಂತು ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ನರ್ಮದಾ ಹೆಗಡೆ ವಂದಿಸಿದರು. ನಿವೃತ್ತ ಅಧಿಕಾರಿ ಆರ್.ಎ.ಖಾಜಿ ಉಪಸ್ಥಿತರಿದ್ದರು.