‘ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಂಸ್ಕೃತಿಕ, ಮನರಂಜನಾತ್ಮಕ ಉತ್ಸವಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಬನವಾಸಿಯಲ್ಲಿ ಕದಂಬೋತ್ಸವ, ಕಾರವಾರದಲ್ಲಿ ಕರಾವಳಿ ಉತ್ಸವ, ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್, ದಾಂಡೇಲಿಯಲ್ಲಿ ಹಾರ್ನ್ ಬಿಲ್ ಉತ್ಸವದಂತೆ ಪ್ರತಿ ಶಿವರಾತ್ರಿಯಂದು ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಈ ವರ್ಷ ಸ್ಥಳೀಯ ಮಟ್ಟದಲ್ಲಿ ಪ್ರಾರಂಭಿಸಲಾಗಿದೆ’ ಎಂದರು.