ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ₹ 19ಸಾವಿರ ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ, ಪ್ರವಾಹದಲ್ಲಿ ಸಂತ್ರಸ್ತರಾದವರ ಬಗ್ಗೆ ಉದಾಸೀನ ತೋರುತ್ತಿರುವುದು ರೈತರಿಗೆ ಮಾಡುತ್ತಿರುವ ಅವಮಾನವಾಗಿದೆ. ಸಹಕಾರಿ ಸಂಸ್ಥೆ ಹಾಗೂ ಬ್ಯಾಂಕ್ಗಳಿಂದ ಕೃಷಿಕರಿಗಾಗುತ್ತಿರುವ ಕಿರುಕುಳ ತಪ್ಪಿಸಬೇಕು. ಕಷ್ಟದಲ್ಲಿರುವ ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ನೆರೆ ಸಂತ್ರಸ್ತರಿಗೆ ಪರಿಹಾರ ಮೊತ್ತ ನೀಡದಿದ್ದರೆ ಅ.22ರಂದು ರೈತ ಸಂಘದ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು. ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ರಾಘವೇಂದ್ರ ನಾಯ್ಕ, ಸತೀಶ ನಾಯ್ಕ, ವೀರಭದ್ರ ನಾಯ್ಕ, ಜಾಕೀರ್ ದಾಸನಕೊಪ್ಪ ಉಪಸ್ಥಿತರಿದ್ದರು.