‘ತಾಲ್ಲೂಕಿನ ಪೂರ್ವಭಾಗದಲ್ಲಿ ಹೆಚ್ಚಿನ ಕೆರೆಗಳಿವೆ. ಪಶ್ಚಿಮ ಭಾಗದಲ್ಲಿರುವ ಬೆರಳೆಣಿಕೆಯಷ್ಟು ಕೆರೆಗಳ ಪೈಕಿ ಇದೂ ಒಂದು. ಎರಡು ತಲೆಮಾರುಗಳು ಕಳೆದರೂ ಕೆರೆಗೆ ಕಾಯಕಲ್ಪ ನೀಡಲಾಗಿಲ್ಲ. ವರ್ಷವೂ ಕೆರೆಯಲ್ಲಿ ಹೂಳು ತುಂಬುತ್ತಿರುವುದರಿಂದ ಗ್ರಾಮದಲ್ಲಿರುವ ಜಲಮೂಲಗಳ ಮೇಲೂ ಅಡ್ಡಪರಿಣಾಮ ಬೀರಿದೆ’ ಎನ್ನುತ್ತಾರೆ ಗ್ರಾಮಸ್ಥರಾದ ಅನಂತ ಭಟ್ಟ, ಪ್ರಶಾಂತ ಭಟ್ಟ, ಯೋಗೀಶ ಭಟ್ಟ.