<p><strong>ಕಾರವಾರ: </strong>ನಗರದ ವಾಣಿಜ್ಯ ಬಂದರಿನ ಎರಡನೇ ಹಂತದ ವಿಸ್ತರಣೆ ಸಂಬಂಧ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ರಮೇಶ ಡಿ.ನಾಯ್ಕ ಅವರು ಇಲ್ಲಿನ ಕಡಲತೀರವನ್ನು ಗುರುವಾರ ಪರಿಶೀಲಿಸಿದರು.</p>.<p>ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರು ಕೇಂದ್ರ ಕಚೇರಿಯ ಸೂಚನೆಯ ಮೇರೆಗೆ ಅವರು ನಗರಕ್ಕೆ ಭೇಟಿ ನೀಡಿದರು. ಬಂದರು ವಿಸ್ತರಣೆ ಸಂಬಂಧ ಈಗಿನ ಸ್ಥಿತಿಗತಿಯನ್ನು, ಸ್ಥಳೀಯರ ಅಭಿಪ್ರಾಯಗಳನ್ನು ಪರಾಮರ್ಶಿಸಿದರು.</p>.<p>ಬಂದರು ವಿಸ್ತರಣೆ ಸಂಬಂಧ ಬಳಸಲು ಉದ್ದೇಶಿಸಲಾಗಿರುವ ರವೀಂದ್ರನಾಥ ಟ್ಯಾಗೋರ್ ಕಡಲತೀರದ ಮಕ್ಕಳ ಉದ್ಯಾನದ ಬಳಿ, ಅಲಿಗದ್ದಾ, ಬಂದರು ಪ್ರದೇಶವನ್ನು ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮೀನುಗಾರರ ಮುಖಂಡರು, ಸ್ಥಳೀಯರು ಬಂದರು ವಿಸ್ತರಣೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ತಿಳಿಸಿದರು. ಇದಕ್ಕೂ ಮೊದಲು ಮೀನುಗಾರರ ಮನವಿಗಳನ್ನು ಸ್ವೀಕರಿಸಿ, ಕೇಂದ್ರ ಕಚೇರಿಗೆ ಸಮಗ್ರವಾದ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದರು.</p>.<p>ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಜಿಲ್ಲಾ ಸಹಕಾರ ಮೀನು ಮಾರಾಟ ಒಕ್ಕೂಟದ ಅಧ್ಯಕ್ಷ ರಾಜು ತಾಂಡೇಲ, ವಕೀಲ ಬಿ.ಎಸ್.ಪೈ ಮುಂತಾದವರಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರವಾರ ಕಚೇರಿಯ ಪರಿಸರ ಅಧಿಕಾರಿ ಡಾ.ಎಚ್.ಲಕ್ಷ್ಮೀಕಾಂತ, ಉಪ ಪರಿಸರ ಅಧಿಕಾರಿ ಡಾ.ಗಣಪತಿ ಹೆಗಡೆ ಜೊತೆಗಿದ್ದರು.</p>.<p><strong>ಮನವಿ: </strong>‘ನಗರದಲ್ಲಿ ಕೋಣೆ ನಾಲೆಯು ಸಮುದ್ರ ಸೇರುವಲ್ಲಿ ದೊಡ್ಡ ತಡೆಗೋಡೆ ನಿರ್ಮಿಸಲಾಗಿದೆ. ಇದರಲ್ಲಿ ನಿಯಮದ ಉಲ್ಲಂಘನೆಯಾಗಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಬೈತಖೋಲ್ನ ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಒತ್ತಾಯಿಸಿದ್ದಾರೆ.</p>.<p>ನಗರಕ್ಕೆ ಗುರುವಾರ ಭೇಟಿ ನೀಡಿದ್ದ ಮಂಡಳಿಯ ಮಂಗಳೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ರಮೇಶ ಡಿ.ನಾಯ್ಕ ಅವರ ಮೂಲಕ ಕೇಂದ್ರ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ವಾಣಿಜ್ಯ ಬಂದರಿನ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಯಲ್ಲಿ, ಕೋಣೆನಾಲಾವು ಸಮುದ್ರ ಸೇರುವ ಪ್ರದೇಶವೂ ಒಳಗೊಳ್ಳುತ್ತದೆ. ಇಲ್ಲಿ ನಿರ್ಮಿಸಲಾಗಿರುವ ತಡೆಗೋಡೆಯನ್ನು ಯಾವ ಇಲಾಖೆಯವರು, ಯಾಕಾಗಿ ನಿರ್ಮಿಸಿದ್ದಾರೆ ಎಂದು ಸಾರ್ವಜನಿಕರಿಗೆ ಗೊತ್ತಿಲ್ಲ. ಈ ಕಾಮಗಾರಿಯು ಬಂದರು ವಿಸ್ತರಣೆ ಕಾಮಗಾರಿಯ ಪ್ರಾರಂಭಿಕ ಹಂತವಾಗಿರಬಹುದು ಎಂಬ ಸಂಶಯವಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ಈ ಕಾಮಗಾರಿಯು ಕಾನೂನಿಗೆ ವಿರುದ್ಧವಾಗಿ ಆಗಿದ್ದರೆ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ನಗರದ ವಾಣಿಜ್ಯ ಬಂದರಿನ ಎರಡನೇ ಹಂತದ ವಿಸ್ತರಣೆ ಸಂಬಂಧ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ರಮೇಶ ಡಿ.ನಾಯ್ಕ ಅವರು ಇಲ್ಲಿನ ಕಡಲತೀರವನ್ನು ಗುರುವಾರ ಪರಿಶೀಲಿಸಿದರು.</p>.<p>ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರು ಕೇಂದ್ರ ಕಚೇರಿಯ ಸೂಚನೆಯ ಮೇರೆಗೆ ಅವರು ನಗರಕ್ಕೆ ಭೇಟಿ ನೀಡಿದರು. ಬಂದರು ವಿಸ್ತರಣೆ ಸಂಬಂಧ ಈಗಿನ ಸ್ಥಿತಿಗತಿಯನ್ನು, ಸ್ಥಳೀಯರ ಅಭಿಪ್ರಾಯಗಳನ್ನು ಪರಾಮರ್ಶಿಸಿದರು.</p>.<p>ಬಂದರು ವಿಸ್ತರಣೆ ಸಂಬಂಧ ಬಳಸಲು ಉದ್ದೇಶಿಸಲಾಗಿರುವ ರವೀಂದ್ರನಾಥ ಟ್ಯಾಗೋರ್ ಕಡಲತೀರದ ಮಕ್ಕಳ ಉದ್ಯಾನದ ಬಳಿ, ಅಲಿಗದ್ದಾ, ಬಂದರು ಪ್ರದೇಶವನ್ನು ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮೀನುಗಾರರ ಮುಖಂಡರು, ಸ್ಥಳೀಯರು ಬಂದರು ವಿಸ್ತರಣೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ತಿಳಿಸಿದರು. ಇದಕ್ಕೂ ಮೊದಲು ಮೀನುಗಾರರ ಮನವಿಗಳನ್ನು ಸ್ವೀಕರಿಸಿ, ಕೇಂದ್ರ ಕಚೇರಿಗೆ ಸಮಗ್ರವಾದ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದರು.</p>.<p>ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಜಿಲ್ಲಾ ಸಹಕಾರ ಮೀನು ಮಾರಾಟ ಒಕ್ಕೂಟದ ಅಧ್ಯಕ್ಷ ರಾಜು ತಾಂಡೇಲ, ವಕೀಲ ಬಿ.ಎಸ್.ಪೈ ಮುಂತಾದವರಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರವಾರ ಕಚೇರಿಯ ಪರಿಸರ ಅಧಿಕಾರಿ ಡಾ.ಎಚ್.ಲಕ್ಷ್ಮೀಕಾಂತ, ಉಪ ಪರಿಸರ ಅಧಿಕಾರಿ ಡಾ.ಗಣಪತಿ ಹೆಗಡೆ ಜೊತೆಗಿದ್ದರು.</p>.<p><strong>ಮನವಿ: </strong>‘ನಗರದಲ್ಲಿ ಕೋಣೆ ನಾಲೆಯು ಸಮುದ್ರ ಸೇರುವಲ್ಲಿ ದೊಡ್ಡ ತಡೆಗೋಡೆ ನಿರ್ಮಿಸಲಾಗಿದೆ. ಇದರಲ್ಲಿ ನಿಯಮದ ಉಲ್ಲಂಘನೆಯಾಗಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಬೈತಖೋಲ್ನ ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಒತ್ತಾಯಿಸಿದ್ದಾರೆ.</p>.<p>ನಗರಕ್ಕೆ ಗುರುವಾರ ಭೇಟಿ ನೀಡಿದ್ದ ಮಂಡಳಿಯ ಮಂಗಳೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ರಮೇಶ ಡಿ.ನಾಯ್ಕ ಅವರ ಮೂಲಕ ಕೇಂದ್ರ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘ವಾಣಿಜ್ಯ ಬಂದರಿನ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಯಲ್ಲಿ, ಕೋಣೆನಾಲಾವು ಸಮುದ್ರ ಸೇರುವ ಪ್ರದೇಶವೂ ಒಳಗೊಳ್ಳುತ್ತದೆ. ಇಲ್ಲಿ ನಿರ್ಮಿಸಲಾಗಿರುವ ತಡೆಗೋಡೆಯನ್ನು ಯಾವ ಇಲಾಖೆಯವರು, ಯಾಕಾಗಿ ನಿರ್ಮಿಸಿದ್ದಾರೆ ಎಂದು ಸಾರ್ವಜನಿಕರಿಗೆ ಗೊತ್ತಿಲ್ಲ. ಈ ಕಾಮಗಾರಿಯು ಬಂದರು ವಿಸ್ತರಣೆ ಕಾಮಗಾರಿಯ ಪ್ರಾರಂಭಿಕ ಹಂತವಾಗಿರಬಹುದು ಎಂಬ ಸಂಶಯವಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ಈ ಕಾಮಗಾರಿಯು ಕಾನೂನಿಗೆ ವಿರುದ್ಧವಾಗಿ ಆಗಿದ್ದರೆ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>