ಈ ಬಗ್ಗೆ ಪ್ರತಿಕ್ರಿಯಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗಾಧಿಕಾರಿ ರಾಜಕುಮಾರ, 'ಭಾನುವಾರ 50 ಬಸ್ಗಳ ಸಂಚಾರ ಆರಂಭಿಸುವ ಗುರಿ ಹೊಂದಲಾಗಿತ್ತು. ರಜಾ ದಿನವೂ ಆಗಿರುವ ಕಾರಣ ಹೆಚ್ಚಿನ ಮಾರ್ಗಗಳಲ್ಲಿ ಸಂಚಾರ ಸಾಧ್ಯವಾಗಲಿಲ್ಲ. ಶೇ 70ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಸಿದ್ಧರಾಗಿದ್ದಾರೆ. ಆದರೆ, ಕೆಲವರಿಂದ ಅಡ್ಡಿಯಾಗುತ್ತಿದೆ. ಸೋಮವಾರ 100 ಬಸ್ಗಳನ್ನು ಆರಂಭಿಸುವ ವಿಶ್ವಾಸವಿದೆ' ಎಂದು ತಿಳಿಸಿದರು.