ಕೆಲಸ ಸರಿಯಾಗಿ ಮಾಡದೇ ಹಣ ಕೇಳಲು ಬಂದ ಎಂದು ಸಿಟ್ಟಿಗೆದ್ದ ಆರೋಪಿ ಅವಾಚ್ಯ ಶಬ್ದದಿಂದ ನಿಂದಿಸಿದರು. ಕಬ್ಬಿಣದ ರಾಡಿನಿಂದ ತಲೆಗೆ, ಕೈಗೆ, ಕಿವಿಯ ಮೆಲೆ, ಕೆನ್ನೆಯ ಮೇಲೆ ಮತ್ತು ಕಾಲಿಗೆ ಹೊಡೆದಿದ್ದಾರೆ ಎಂದು ಆಪಾದಿಸಲಾಗಿದೆ. ತೀವ್ರ ಗಾಯಗೊಂಡ ರಾಮ ಗೌಡ ಅವರಿಗೆ ಗೋಕರ್ಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಆ.31ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.