ಕಾರವಾರ:ದೂರದ ಅಸ್ಸಾಂ ರಾಜ್ಯದ ಆ ಯುವಕ ನೌಕರಿ ನಿಮಿತ್ತ ಬೆಂಗಳೂರಿನಿಂದ ಪಣಜಿಗೆ ಪ್ರಯಾಣಿಸುತ್ತಿದ್ದರು. ಮಾರ್ಚ್ 24ರಂದು ಕಾರವಾರಕ್ಕೆ ತಲುಪಿದಾಗ ಲಾಕ್ಡೌನ್ ಘೋಷಣೆಯಾಗಿ, ಇಲ್ಲೇ ಬಾಕಿಯಾದರು. ಏ.8ರಂದು ಸ್ವಗ್ರಾಮದಲ್ಲಿ ತಾಯಿ ಮೃತಪಟ್ಟರು. ಆದರೆ, ಅವರ ಮುಖವನ್ನು ಕೊನೆಯ ಬಾರಿಗೊಮ್ಮೆ ನೋಡಲಾಗದೇದುಃಖಿಸುತ್ತಿದ್ದಾರೆ.