<p><strong>ಶಿರಸಿ: </strong>ದೇಶ ಸ್ವಾತಂತ್ರ್ಯೋತ್ಸವದ ಅಮೃತ ವರ್ಷದ ಹೊಸ್ತಿಲಿಗೆ ತಲುಪಿದ್ದರೂ ಸಂವಿಧಾನಾತ್ಮಕ ಭೂಮಿ ಹಕ್ಕಿನಿಂದ ವಂಚಿತವಾದ ಲಕ್ಷಾಂತರ ಜನರಿದ್ದಾರೆ. ಅವರ ಹಕ್ಕು ನೀಡಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.</p>.<p>ಅರಣ್ಯವಾಸಿಗಳ ಭೂಮಿ ಹಕ್ಕಿನ ಸಮಸ್ಯೆ ಸರ್ಕಾರದ ಗಮನ ಸೆಳೆಯುವ ಉದ್ದೇಶಕ್ಕೆ ಸ್ವಾತಂತ್ರ್ಯೋತ್ಸವದ ದಿನ ‘ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ?’ ಘೋಷಣೆ ಅಡಿ ವೇದಿಕೆ ವತಿಯಿಂದ ಪಾದಯಾತ್ರೆ ನಡೆಸಿ, ಬಳಿಕ ಕಚೇರಿಯಲ್ಲಿ ಸೈನಿಕರಾದ ನವೀನ್ ಹರಿಹರ ನಾಯ್ಕ, ಓಂಕಾರ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಸನ್ಮಾನ ಸ್ವೀಕರಿಸಿದ ನವೀನಕುಮಾರ, ‘ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಳ್ಳಬೇಕು. ದೇಶಕ್ಕಾಗಿ ಕೈಲಾದ ಸೇವೆ ಮಾಡಬೇಕು’ ಎಂದರು.</p>.<p>ನೂರಾರು ಅರಣ್ಯ ಅತಿಕ್ರಮಣದಾರರು ಹೋರಾಟ ವೇದಿಕೆಯ ಕಾರ್ಯಾಲಯದಿಂದ ಝೂ ಸರ್ಕಲ್ ವರೆಗೆ ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆ ಮಾಡಿದ್ದರು.</p>.<p>ಸತೀಶ ನಾಯ್ಕ ಮಧುರವಳ್ಳಿ, ಹರಿಹರ ನಾಯ್ಕ ಹುಕ್ಕಳಿ, ಇಬ್ರಾಹಿಂ ಸಾಬ, ಲಕ್ಷ್ಮಣ ಮಾಳ್ಳಕ್ಕನವರ, ಶಿವಪ್ಪ ಹಂಚಿನಕೇರಿ, ದ್ಯಾವಾ ಗೌಡ ಹೆಗ್ಗೆ, ಸೀತಾರಾಮ ಗೌಡ ಹುಕ್ಕಳಿ, ರಾಜು ನರೇಬೈಲ್, ಶಿವಾನಂದ ಜೋಗಿ, ಸ್ವಾಮಿ ಹಿರೇಮಠ, ಸೀತಾರಾಮ ಗೌಡ, ಎಂ.ಪಿ.ಗೌಡ ಹುಕ್ಕಳಿ, ರಾಜು ಉಗ್ರಾಣಕರ, ಮಧುಕರ ಜೋಗಿನಮನೆ, ನಾಗಪತಿ ಗೌಡ, ಮಂಜುನಾಥ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ದೇಶ ಸ್ವಾತಂತ್ರ್ಯೋತ್ಸವದ ಅಮೃತ ವರ್ಷದ ಹೊಸ್ತಿಲಿಗೆ ತಲುಪಿದ್ದರೂ ಸಂವಿಧಾನಾತ್ಮಕ ಭೂಮಿ ಹಕ್ಕಿನಿಂದ ವಂಚಿತವಾದ ಲಕ್ಷಾಂತರ ಜನರಿದ್ದಾರೆ. ಅವರ ಹಕ್ಕು ನೀಡಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.</p>.<p>ಅರಣ್ಯವಾಸಿಗಳ ಭೂಮಿ ಹಕ್ಕಿನ ಸಮಸ್ಯೆ ಸರ್ಕಾರದ ಗಮನ ಸೆಳೆಯುವ ಉದ್ದೇಶಕ್ಕೆ ಸ್ವಾತಂತ್ರ್ಯೋತ್ಸವದ ದಿನ ‘ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ?’ ಘೋಷಣೆ ಅಡಿ ವೇದಿಕೆ ವತಿಯಿಂದ ಪಾದಯಾತ್ರೆ ನಡೆಸಿ, ಬಳಿಕ ಕಚೇರಿಯಲ್ಲಿ ಸೈನಿಕರಾದ ನವೀನ್ ಹರಿಹರ ನಾಯ್ಕ, ಓಂಕಾರ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p>ಸನ್ಮಾನ ಸ್ವೀಕರಿಸಿದ ನವೀನಕುಮಾರ, ‘ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಳ್ಳಬೇಕು. ದೇಶಕ್ಕಾಗಿ ಕೈಲಾದ ಸೇವೆ ಮಾಡಬೇಕು’ ಎಂದರು.</p>.<p>ನೂರಾರು ಅರಣ್ಯ ಅತಿಕ್ರಮಣದಾರರು ಹೋರಾಟ ವೇದಿಕೆಯ ಕಾರ್ಯಾಲಯದಿಂದ ಝೂ ಸರ್ಕಲ್ ವರೆಗೆ ರಾಷ್ಟ್ರಧ್ವಜ ಹಿಡಿದು ಪಾದಯಾತ್ರೆ ಮಾಡಿದ್ದರು.</p>.<p>ಸತೀಶ ನಾಯ್ಕ ಮಧುರವಳ್ಳಿ, ಹರಿಹರ ನಾಯ್ಕ ಹುಕ್ಕಳಿ, ಇಬ್ರಾಹಿಂ ಸಾಬ, ಲಕ್ಷ್ಮಣ ಮಾಳ್ಳಕ್ಕನವರ, ಶಿವಪ್ಪ ಹಂಚಿನಕೇರಿ, ದ್ಯಾವಾ ಗೌಡ ಹೆಗ್ಗೆ, ಸೀತಾರಾಮ ಗೌಡ ಹುಕ್ಕಳಿ, ರಾಜು ನರೇಬೈಲ್, ಶಿವಾನಂದ ಜೋಗಿ, ಸ್ವಾಮಿ ಹಿರೇಮಠ, ಸೀತಾರಾಮ ಗೌಡ, ಎಂ.ಪಿ.ಗೌಡ ಹುಕ್ಕಳಿ, ರಾಜು ಉಗ್ರಾಣಕರ, ಮಧುಕರ ಜೋಗಿನಮನೆ, ನಾಗಪತಿ ಗೌಡ, ಮಂಜುನಾಥ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>