<p><strong>ಕಾರವಾರ:</strong> ಜುಲೈ 22 ಹಾಗೂ 23ರಂದು ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿಯ ಮತ್ತಷ್ಟು ನಿದರ್ಶನಗಳು ಒಂದೊಂದೇ ತೆರೆದುಕೊಳ್ಳುತ್ತಿವೆ. ತಾಲ್ಲೂಕಿನ ಕೊಡಸಳ್ಳಿ ಹಾಗೂ ಕದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ದಟ್ಟಾರಣ್ಯದ ನಡುವೆ ಭಾರಿ ಪ್ರಮಾಣದಲ್ಲಿ ಭೂ ಕುಸಿತವಾಗಿದೆ.</p>.<p>ಜಲಾಶಯಗಳ ಮೇಲ್ಭಾಗದಿಂದ ಹಲವಾರು ಕಡೆಗಳಲ್ಲಿ ಅಪಾರ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದು ಕೆಳಗೆ ಜಾರಿದೆ. ಅವೆಷ್ಟೋ ಮರ ಗಿಡಗಳು, ಬಂಡೆಗಳು ಹಾಗೂ ಸಾವಿರಾರು ಟನ್ ಮರಳು ಮಿಶ್ರಿತ ಮಣ್ಣು ಕೆಳಭಾಗದ ಜಮೀನನ್ನು ಆವರಿಸಿಕೊಂಡಿವೆ. ತೋಟ ಹಾಗೂ ಗದ್ದೆಗಳಿಗೆ ಹಾನಿಯಾಗಿದೆ.</p>.<p>‘ಈ ಭಾಗದಲ್ಲಿ ಇದಕ್ಕಿಂತಲೂ ಹೆಚ್ಚು ಮಳೆಯಾಗಿದ್ದನ್ನು ಈ ಹಿಂದೆ ಕಂಡಿದ್ದೇವೆ. ಆದರೆ, ಈ ಪ್ರಮಾಣದಲ್ಲಿ ಮಣ್ಣು ಕುಸಿದಿರುವುದು ಇದೇ ಮೊದಲು. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಮತ್ತಷ್ಟು ಪ್ರಮಾಣದಲ್ಲಿ ಮಣ್ಣು ಕುಸಿಯಬಹುದು ಎಂಬ ಆತಂಕ ಕಾಡುತ್ತಿದೆ’ ಎನ್ನುತ್ತಾರೆ ಕದ್ರಾ ಗ್ರಾಮ ಪಂಚಾಯಿತಿ ಸದಸ್ಯ ಶ್ಯಾಮನಾಥ ನಾಯ್ಕ ಹೇಳುತ್ತಾರೆ.</p>.<p>‘ಕೊಡಸಳ್ಳಿ ಜಲಾಶಯದ ಮೇಲ್ಭಾಗದಲ್ಲಿ 2019ರಲ್ಲಿ ಗುಡ್ಡ ಕುಸಿದಿತ್ತು. ಈ ಸಲ ಕೆಳಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಈ ಭಾಗದಲ್ಲಿ ಕೈಗಾ ಅಣು ವಿದ್ಯುತ್ ಉತ್ಪಾದನಾ ಸ್ಥಾವರ, ಕದ್ರಾ ಜಲ ವಿದ್ಯುತ್ ಘಟಕಗಳಿವೆ. ಇವುಗಳ ಸುರಕ್ಷತೆಯನ್ನೂ ಗಮನಕ್ಕೆ ಗಮನಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಸರ್ಕಾರವು ಪರಿಣತರನ್ನು ಕರೆಯಿಸಿ ಸ್ಥಳ ಪರೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಪ್ರಕೃತಿ ವಿಕೋಪದಲ್ಲಿ ಮನೆ, ಆಸ್ತಿ, ಜಾನುವಾರು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಪುನರ್ವಸತಿ ಕಲ್ಪಿಸಿಕೊಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಜುಲೈ 22 ಹಾಗೂ 23ರಂದು ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿಯ ಮತ್ತಷ್ಟು ನಿದರ್ಶನಗಳು ಒಂದೊಂದೇ ತೆರೆದುಕೊಳ್ಳುತ್ತಿವೆ. ತಾಲ್ಲೂಕಿನ ಕೊಡಸಳ್ಳಿ ಹಾಗೂ ಕದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ದಟ್ಟಾರಣ್ಯದ ನಡುವೆ ಭಾರಿ ಪ್ರಮಾಣದಲ್ಲಿ ಭೂ ಕುಸಿತವಾಗಿದೆ.</p>.<p>ಜಲಾಶಯಗಳ ಮೇಲ್ಭಾಗದಿಂದ ಹಲವಾರು ಕಡೆಗಳಲ್ಲಿ ಅಪಾರ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದು ಕೆಳಗೆ ಜಾರಿದೆ. ಅವೆಷ್ಟೋ ಮರ ಗಿಡಗಳು, ಬಂಡೆಗಳು ಹಾಗೂ ಸಾವಿರಾರು ಟನ್ ಮರಳು ಮಿಶ್ರಿತ ಮಣ್ಣು ಕೆಳಭಾಗದ ಜಮೀನನ್ನು ಆವರಿಸಿಕೊಂಡಿವೆ. ತೋಟ ಹಾಗೂ ಗದ್ದೆಗಳಿಗೆ ಹಾನಿಯಾಗಿದೆ.</p>.<p>‘ಈ ಭಾಗದಲ್ಲಿ ಇದಕ್ಕಿಂತಲೂ ಹೆಚ್ಚು ಮಳೆಯಾಗಿದ್ದನ್ನು ಈ ಹಿಂದೆ ಕಂಡಿದ್ದೇವೆ. ಆದರೆ, ಈ ಪ್ರಮಾಣದಲ್ಲಿ ಮಣ್ಣು ಕುಸಿದಿರುವುದು ಇದೇ ಮೊದಲು. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಮತ್ತಷ್ಟು ಪ್ರಮಾಣದಲ್ಲಿ ಮಣ್ಣು ಕುಸಿಯಬಹುದು ಎಂಬ ಆತಂಕ ಕಾಡುತ್ತಿದೆ’ ಎನ್ನುತ್ತಾರೆ ಕದ್ರಾ ಗ್ರಾಮ ಪಂಚಾಯಿತಿ ಸದಸ್ಯ ಶ್ಯಾಮನಾಥ ನಾಯ್ಕ ಹೇಳುತ್ತಾರೆ.</p>.<p>‘ಕೊಡಸಳ್ಳಿ ಜಲಾಶಯದ ಮೇಲ್ಭಾಗದಲ್ಲಿ 2019ರಲ್ಲಿ ಗುಡ್ಡ ಕುಸಿದಿತ್ತು. ಈ ಸಲ ಕೆಳಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಈ ಭಾಗದಲ್ಲಿ ಕೈಗಾ ಅಣು ವಿದ್ಯುತ್ ಉತ್ಪಾದನಾ ಸ್ಥಾವರ, ಕದ್ರಾ ಜಲ ವಿದ್ಯುತ್ ಘಟಕಗಳಿವೆ. ಇವುಗಳ ಸುರಕ್ಷತೆಯನ್ನೂ ಗಮನಕ್ಕೆ ಗಮನಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಸರ್ಕಾರವು ಪರಿಣತರನ್ನು ಕರೆಯಿಸಿ ಸ್ಥಳ ಪರೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಪ್ರಕೃತಿ ವಿಕೋಪದಲ್ಲಿ ಮನೆ, ಆಸ್ತಿ, ಜಾನುವಾರು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಪುನರ್ವಸತಿ ಕಲ್ಪಿಸಿಕೊಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>