ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸಜ್ಜಿತ ಆಸ್ಪತ್ರೆ: ಅ.5ರಂದು ಜಾಗ ಅಂತಿಮ- ಶಾಸಕ ದಿನಕರ ಶೆಟ್ಟಿ

Last Updated 21 ಸೆಪ್ಟೆಂಬರ್ 2019, 11:01 IST
ಅಕ್ಷರ ಗಾತ್ರ

ಕಾರವಾರ: ಕುಮಟಾದಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪಿಸುವ ಸಂಬಂಧ ಉದ್ಯಮಿ ಬಿ.ಆರ್.ಶೆಟ್ಟಿ ಅವರಕಾರ್ಯದರ್ಶಿ ಕುಶಾಲ್ ಶೆಟ್ಟಿ ಅ.5ರಂದು ಕುಮಟಾಕ್ಕೆಬರಲಿದ್ದಾರೆ. ಈಗಾಗಲೇ ಗುರುತಿಸಿರುವ ಜಾಗಗಳಲ್ಲಿ ಒಂದನ್ನು ಅಂದು ಅಂತಿಮಗೊಳಿಸಲಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದ್ದಾರೆ.

ಆಸ್ಪತ್ರೆ ಸ್ಥಾಪಿಸಲು ಆಸಕ್ತರಾಗಿರುವ ಬಿ.ಆರ್.ಶೆಟ್ಟಿ ಅವರೊಂದಿಗೆ ಬೆಂಗಳೂರಿನತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಸಭೆಯ ಬಗ್ಗೆ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‘ಜಿಲ್ಲೆಯ ಕರಾವಳಿ ಭಾಗದ ಜನರ ಬಹು ಬೇಡಿಕೆಯಾಗಿರುವ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಯ ಬಗ್ಗೆ ಚರ್ಚಿಸಲೆಂದೇ ಅವರು ದುಬೈನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದರು. ಸುಮಾರು 20 ನಿಮಿಷಗಳ ಮಾತುಕತೆಯಲ್ಲಿ ಕುಮಟಾ ಸುತ್ತಮುತ್ತಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಯೋಜನೆ ಹಮ್ಮಿಕೊಳ್ಳಲು ಆಸಕ್ತಿ ಹೊಂದಿರುವುದನ್ನು ಅವರು ವಿವರಿಸಿದರು’ ಎಂದು ಹೇಳಿದರು.

‘ಸುಮಾರು 20 ನಿಮಿಷಗಳ ಸಭೆಯಲ್ಲಿ ಆಸ್ಪತ್ರೆ ಸ್ಥಾಪನೆಯ ಅವಶ್ಯಕತೆಯನ್ನು ಅವರು ಮನಗಂಡರು. ಅಲ್ಲದೇ ಜನರ ಸೇವೆ ಮಾಡುವುದು ಬಹುಮುಖ್ಯ ಎಂದು ಅವರ ತಾಯಿ ಕೂಡ ಹೇಳುತ್ತಿದ್ದಕಾರಣ ಆಸ್ಪತ್ರೆ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ’ ಎಂದುದಿನಕರ ಶೆಟ್ಟಿತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT