ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತ ಕಂಡಿದೆ. ಕಾರವಾರದಿಂದ ಜೊಯಿಡಾ ಮೂಲಕ ದಾಂಡೇಲಿ,ಬೆಳಗಾವಿ, ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಇದಾಗಿದ್ದು ಕಳೆದ ವರ್ಷ ಅಪಾರ ಪ್ರಮಾಣದಲ್ಲಿ ಇಲ್ಲಿ ಗುಡ್ಡ ಕುಸಿದು ಸುಮಾರು ಒಂದೂವರೆ ತಿಂಗಳು ಈ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.