<p><strong>ಯಲ್ಲಾಪುರ: </strong>ತಾಲ್ಲೂಕಿನಲ್ಲಿ ಮಳೆಯಿಂದ ಅವಘಡಗಳು ಮುಂದುವರಿದಿದ್ದು, ಅರಬೈಲ್ ಘಟ್ಟದಲ್ಲಿ ಶನಿವಾರ ಗುಡ್ಡ ಮತ್ತೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 63ರ ಒಂದುಭಾಗ ಶುಕ್ರವಾರ ಕುಸಿದಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.</p>.<p>ಈ ಹೆದ್ದಾರಿ ದುರಸ್ತಿಯಾಗುವ ತನಕ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಕಾರವಾರ, ಅಂಕೋಲಾ ಭಾಗದಿಂದ ಯಲ್ಲಾಪುರ, ಹುಬ್ಬಳ್ಳಿಗೆ ಸಾಗುವವರು ಈಗ ಕುಮಟಾ- ಹೊನ್ನಾವರ- ಸಿದ್ದಾಪುರ- ಶಿರಸಿ ಮೂಲಕ ಹೋಗುವಂತೆ ಸೂಚಿಸಿದ್ದಾರೆ.</p>.<p>ಯಲ್ಲಾಪುರ ತಾಲ್ಲೂಕಿನ ತಳಕೆಬೈಲ್ನಲ್ಲಿ ಗುಡ್ಡ ಕುಸಿದ ಪ್ರದೇಶಕ್ಕೆ ಸಚಿವ ಶಿವರಾಮ ಹೆಬ್ಬಾರ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಕಳಚೆಯಲ್ಲಿ ಮನೆ ಬಿದ್ದು ಮೃತಪಟ್ಟ ದೇವಕಿ ಗಾಂವ್ಕರ್ ಅವರ ಕುಟುಂಬದವರಿಗೆ ರೂ. ಐದು ಲಕ್ಷದ ಚೆಕ್ ವಿತರಿಸಿದರು.</p>.<p>ಉಪ ವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ಎ.ಸಿ.ಎಫ್ ಹಿಮವತಿ ಭಟ್ಟ, ಆರ್.ಎಫ್.ಒ ಪೆಡ್ನೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ: </strong>ತಾಲ್ಲೂಕಿನಲ್ಲಿ ಮಳೆಯಿಂದ ಅವಘಡಗಳು ಮುಂದುವರಿದಿದ್ದು, ಅರಬೈಲ್ ಘಟ್ಟದಲ್ಲಿ ಶನಿವಾರ ಗುಡ್ಡ ಮತ್ತೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 63ರ ಒಂದುಭಾಗ ಶುಕ್ರವಾರ ಕುಸಿದಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.</p>.<p>ಈ ಹೆದ್ದಾರಿ ದುರಸ್ತಿಯಾಗುವ ತನಕ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಕಾರವಾರ, ಅಂಕೋಲಾ ಭಾಗದಿಂದ ಯಲ್ಲಾಪುರ, ಹುಬ್ಬಳ್ಳಿಗೆ ಸಾಗುವವರು ಈಗ ಕುಮಟಾ- ಹೊನ್ನಾವರ- ಸಿದ್ದಾಪುರ- ಶಿರಸಿ ಮೂಲಕ ಹೋಗುವಂತೆ ಸೂಚಿಸಿದ್ದಾರೆ.</p>.<p>ಯಲ್ಲಾಪುರ ತಾಲ್ಲೂಕಿನ ತಳಕೆಬೈಲ್ನಲ್ಲಿ ಗುಡ್ಡ ಕುಸಿದ ಪ್ರದೇಶಕ್ಕೆ ಸಚಿವ ಶಿವರಾಮ ಹೆಬ್ಬಾರ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಕಳಚೆಯಲ್ಲಿ ಮನೆ ಬಿದ್ದು ಮೃತಪಟ್ಟ ದೇವಕಿ ಗಾಂವ್ಕರ್ ಅವರ ಕುಟುಂಬದವರಿಗೆ ರೂ. ಐದು ಲಕ್ಷದ ಚೆಕ್ ವಿತರಿಸಿದರು.</p>.<p>ಉಪ ವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ಎ.ಸಿ.ಎಫ್ ಹಿಮವತಿ ಭಟ್ಟ, ಆರ್.ಎಫ್.ಒ ಪೆಡ್ನೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>