‘ಸಮೀಕ್ಷೆಯಲ್ಲಿ ಕಾರ್ಯಕರ್ತರು, ವಕೀಲರು ಮತ್ತು ನ್ಯಾಯಾಧೀಶರು ಭಾಗಿಯಾಗಲಿದ್ದಾರೆ. 89 ವಕೀಲರಿದ್ದು, ಅವರು ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಕಾರ್ಯಕರ್ತರು ತಮ್ಮ ವರದಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಲಿದ್ದಾರೆ. ಸಮೀಕ್ಷೆಯಲ್ಲಿ ಅರ್ಹರೆಂದು ಕಂಡುಬಂದವರನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯ್ಕೆ ಮಾಡಿ ವಸತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಲಾಗುವುದು’ ಎಂದು ವಿವರಿಸಿದರು.