<p>ಕಾರವಾರ: ತಾಲ್ಲೂಕಿನ ಅಮದಳ್ಳಿ ಬಳಿ ಶನಿವಾರ ಮುಂಜಾನೆ ರೈಲು ಬಡಿದು ಗಂಡು ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.</p>.<p>ಮಂಗಳೂರಿನಿಂದ ಕಾರವಾರದ ಕಡೆ ಬರುತ್ತಿದ್ದ ರೈಲಿಗೆ ಚಿರತೆಯು ಸಿಲುಕಿ ಅದರ ಕಾಲು ತುಂಡಾಗಿದ್ದು, ಅಧಿಕ ರಕ್ತಸ್ರಾವವಾಗಿತ್ತು. ಚಿರತೆಗೆ ಅಂದಾಜು ಮೂರು ವರ್ಷ ಆಗಿರಬಹುದು. ಪಶುವೈದ್ಯ ದೀಪಕ್ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು.</p>.<p>ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಸಂತ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಭೇಟಿ ಪರಿಶೀಲನೆ ನಡೆಸಿದರು. ಕಾರವಾರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ತಾಲ್ಲೂಕಿನ ಅಮದಳ್ಳಿ ಬಳಿ ಶನಿವಾರ ಮುಂಜಾನೆ ರೈಲು ಬಡಿದು ಗಂಡು ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.</p>.<p>ಮಂಗಳೂರಿನಿಂದ ಕಾರವಾರದ ಕಡೆ ಬರುತ್ತಿದ್ದ ರೈಲಿಗೆ ಚಿರತೆಯು ಸಿಲುಕಿ ಅದರ ಕಾಲು ತುಂಡಾಗಿದ್ದು, ಅಧಿಕ ರಕ್ತಸ್ರಾವವಾಗಿತ್ತು. ಚಿರತೆಗೆ ಅಂದಾಜು ಮೂರು ವರ್ಷ ಆಗಿರಬಹುದು. ಪಶುವೈದ್ಯ ದೀಪಕ್ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು.</p>.<p>ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಸಂತ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಭೇಟಿ ಪರಿಶೀಲನೆ ನಡೆಸಿದರು. ಕಾರವಾರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>