ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಬಡಿದು ಚಿರತೆ ಸಾವು

Last Updated 20 ಮಾರ್ಚ್ 2021, 13:44 IST
ಅಕ್ಷರ ಗಾತ್ರ

ಕಾರವಾರ: ತಾಲ್ಲೂಕಿನ ಅಮದಳ್ಳಿ ಬಳಿ ಶನಿವಾರ ಮುಂಜಾನೆ ರೈಲು ಬಡಿದು ಗಂಡು ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.

ಮಂಗಳೂರಿನಿಂದ ಕಾರವಾರದ ಕಡೆ ಬರುತ್ತಿದ್ದ ರೈಲಿಗೆ ಚಿರತೆಯು ಸಿಲುಕಿ ಅದರ ಕಾಲು ತುಂಡಾಗಿದ್ದು, ಅಧಿಕ ರಕ್ತಸ್ರಾವವಾಗಿತ್ತು. ಚಿರತೆಗೆ ಅಂದಾಜು ಮೂರು ವರ್ಷ ಆಗಿರಬಹುದು. ಪಶುವೈದ್ಯ ದೀಪಕ್ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು.

ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಸಂತ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಭೇಟಿ ಪರಿಶೀಲನೆ ನಡೆಸಿದರು. ಕಾರವಾರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT