<p><strong>ಕಾರವಾರ:</strong>ಚಿರತೆ ಚರ್ಮವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ಆರೋಪಿಯನ್ನುಸಿ.ಇ.ಎನ್ ಠಾಣೆ ಪೊಲೀಸರು ಭಟ್ಕಳ ತಾಲ್ಲೂಕಿನಕಟಗಾರಕೊಪ್ಪಾದ ಕಬ್ರೆಯಲ್ಲಿ ಸೋಮವಾರ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹ 15 ಲಕ್ಷ ಮೌಲ್ಯದ ಚಿರತೆ ಚರ್ಮ ವಶಪಡಿಸಿಕೊಂಡಿದ್ದಾರೆ.</p>.<p>ಸ್ಥಳೀಯ ನಿವಾಸಿಬೈರಾ ರಾಮಾ ಗೊಂಡಾ ಬಂಧಿತ ಆರೋಪಿಯಾಗಿದ್ದು, ಚಿರತೆ ಚರ್ಮವನ್ನುಚಿತ್ರಾಪುರ– ಶಿರಾಲಿ ಕಡೆಗೆ ಬೈಕ್ನಲ್ಲಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಸಿ.ಇ.ಎನ್ ಠಾಣೆ ಪೊಲೀಸರು, ಭಟ್ಕಳಕ್ಕೆ ತೆರಳಿ ಕಾರ್ಯಾಚರಣೆ ಮಾಡಿದರು.</p>.<p>ಅರಣ್ಯ ಇಲಾಖೆ ಸಿಬ್ಬಂದಿಯೂ ಈ ಕಾರ್ಯಾಚರಣೆಗೆ ಸಹಕಾರ ನೀಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.ಈ ಜಾಲದಲ್ಲಿ ಇನ್ನೆಷ್ಟು ಮಂದಿ ಸೇರಿಕೊಂಡಿದ್ದಾರೆ, ವನ್ಯ ಜೀವಿಯ ಚರ್ಮವನ್ನು ಎಲ್ಲಿಂದ ಪಡೆದುಕೊಂಡಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಸುದರ್ಶನ ನಾಯ್ಕ, ಸಿಬ್ಬಂದಿ ನಾಗರಾಜ ನಾಯ್ಕ, ಉಮೇಶ ನಾಯ್ಕ, ಮಂಜುನಾಥ ಹೆಗಡೆ, ಭಟ್ಕಳ ಎ.ಸಿ.ಎಫ್ ಸುದರ್ಶನ ಜಿ.ಕೆ, ಅರಣ್ಯ ಇಲಾಖೆಯ ಸಿಬ್ಬಂದಿಬಿ.ಪ್ರಮೋದ, ಮಧುಕರ ವಿ ನಾಯ್ಕ, ಕಾಡಪ್ಪ ಗೊಲಬಾವಿ, ಸಣ್ಣಯ್ಯ ಗೊಂಡಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong>ಚಿರತೆ ಚರ್ಮವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ಆರೋಪಿಯನ್ನುಸಿ.ಇ.ಎನ್ ಠಾಣೆ ಪೊಲೀಸರು ಭಟ್ಕಳ ತಾಲ್ಲೂಕಿನಕಟಗಾರಕೊಪ್ಪಾದ ಕಬ್ರೆಯಲ್ಲಿ ಸೋಮವಾರ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹ 15 ಲಕ್ಷ ಮೌಲ್ಯದ ಚಿರತೆ ಚರ್ಮ ವಶಪಡಿಸಿಕೊಂಡಿದ್ದಾರೆ.</p>.<p>ಸ್ಥಳೀಯ ನಿವಾಸಿಬೈರಾ ರಾಮಾ ಗೊಂಡಾ ಬಂಧಿತ ಆರೋಪಿಯಾಗಿದ್ದು, ಚಿರತೆ ಚರ್ಮವನ್ನುಚಿತ್ರಾಪುರ– ಶಿರಾಲಿ ಕಡೆಗೆ ಬೈಕ್ನಲ್ಲಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಸಿ.ಇ.ಎನ್ ಠಾಣೆ ಪೊಲೀಸರು, ಭಟ್ಕಳಕ್ಕೆ ತೆರಳಿ ಕಾರ್ಯಾಚರಣೆ ಮಾಡಿದರು.</p>.<p>ಅರಣ್ಯ ಇಲಾಖೆ ಸಿಬ್ಬಂದಿಯೂ ಈ ಕಾರ್ಯಾಚರಣೆಗೆ ಸಹಕಾರ ನೀಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.ಈ ಜಾಲದಲ್ಲಿ ಇನ್ನೆಷ್ಟು ಮಂದಿ ಸೇರಿಕೊಂಡಿದ್ದಾರೆ, ವನ್ಯ ಜೀವಿಯ ಚರ್ಮವನ್ನು ಎಲ್ಲಿಂದ ಪಡೆದುಕೊಂಡಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಸುದರ್ಶನ ನಾಯ್ಕ, ಸಿಬ್ಬಂದಿ ನಾಗರಾಜ ನಾಯ್ಕ, ಉಮೇಶ ನಾಯ್ಕ, ಮಂಜುನಾಥ ಹೆಗಡೆ, ಭಟ್ಕಳ ಎ.ಸಿ.ಎಫ್ ಸುದರ್ಶನ ಜಿ.ಕೆ, ಅರಣ್ಯ ಇಲಾಖೆಯ ಸಿಬ್ಬಂದಿಬಿ.ಪ್ರಮೋದ, ಮಧುಕರ ವಿ ನಾಯ್ಕ, ಕಾಡಪ್ಪ ಗೊಲಬಾವಿ, ಸಣ್ಣಯ್ಯ ಗೊಂಡಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>