<p><strong>ಶಿರಸಿ:</strong> ‘ಕರ್ನಾಟಕದ ಉದ್ಯೋಗಗಳು ಕನ್ನಡಿಗರ ಹಕ್ಕು’ ಅಭಿಯಾನದ ಭಾಗವಾಗಿ ರಾಜ್ಯದ ವಿವಿಧ ಬ್ಯಾಂಕ್ಗಳಲ್ಲಿ ಬರುವ ಆಗಸ್ಟ್ 15ರ ಒಳಗಾಗಿ ಕನ್ನಡ ಬಳಕೆ ಮಾಡುವಂತೆ ಪತ್ರ ಚಳವಳಿ ಆರಂಭಿಸಲಾಗುತ್ತದೆ ಎಂದು ನಾವು ಕನ್ನಡಿಗರು ಸಂಘಟನೆಯ ಅಧ್ಯಕ್ಷ ಗಣೇಶ ಭಟ್ಟ ಉಪ್ಪೋಣಿ ಹೇಳಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡ ಭಾಷೆ ಮಾತ್ರವಲ್ಲ, ಕನ್ನಡಿಗರನ್ನು ಸಹ ತಿರಸ್ಕರಿಸಲಾಗುತ್ತಿದೆ. ಅನ್ಯ ಭಾಷಿಕ ಸಿಬ್ಬಂದಿಯಿಂದ ಕನ್ನಡ ಭಾಷೆ ಮಾತ್ರ ಗೊತ್ತಿರುವ ಗ್ರಾಹಕರಿಗೆ ಬ್ಯಾಂಕ್ಗಳಲ್ಲಿ ವ್ಯವಹರಿಸುವುದು ಕಷ್ಟವಾಗಿದೆ. ಈ ಬಗ್ಗೆ ಗಮನ ಸೆಳೆಯಲು ಜುಲೈ 7ರಿಂದ ಅಭಿಯಾನ ನಡೆಸಲಾಗುತ್ತದೆ. ಶಿರಸಿಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ನ ಪ್ರತಿ ಶಾಖೆಗೆ ತೆರಳಿ, ಅಲ್ಲಿನ ಮಾಹಿತಿ ಫಲಕ, ಚಲನ್, ಇತರ ದೈನಂದಿನ ಅಗತ್ಯಗಳು ಕನ್ನಡದಲ್ಲೇ ಇರುವಂತೆ ಒತ್ತಾಯಿಸಿ, ಪ್ರಬಂಧಕರಿಗೆ ಎಚ್ಚರಿಕೆ ಪತ್ರ ನೀಡಲಾಗುವುದು’ ಎಂದರು.</p>.<p>ಇದಕ್ಕೆ ಸ್ಪಂದನೆ ಸಿಗದಿದ್ದಲ್ಲಿ ಕಾನೂನು ಹೋರಾಟ ಮಡೆಸಲಾಗುತ್ತದೆ. ಕನ್ನಡ ಬಳಕೆ ಕಡ್ಡಾಯಗೊಳಿಸುವ ಕಾರ್ಯದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಕೈಜೋಡಿಸಬೇಕು ಎಂದು ಹೇಳಿದರು. ಸಂಘಟನೆ ಪ್ರಮುಖರಾದ ಪ್ರಸನ್ನ ನಾಯ್ಕ, ಗಣೇಶ ಕಂಬಾರ, ಮದನ್, ಸುಶೀಲ್ಕುಮಾರ್, ಸಂದೇಶ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಕರ್ನಾಟಕದ ಉದ್ಯೋಗಗಳು ಕನ್ನಡಿಗರ ಹಕ್ಕು’ ಅಭಿಯಾನದ ಭಾಗವಾಗಿ ರಾಜ್ಯದ ವಿವಿಧ ಬ್ಯಾಂಕ್ಗಳಲ್ಲಿ ಬರುವ ಆಗಸ್ಟ್ 15ರ ಒಳಗಾಗಿ ಕನ್ನಡ ಬಳಕೆ ಮಾಡುವಂತೆ ಪತ್ರ ಚಳವಳಿ ಆರಂಭಿಸಲಾಗುತ್ತದೆ ಎಂದು ನಾವು ಕನ್ನಡಿಗರು ಸಂಘಟನೆಯ ಅಧ್ಯಕ್ಷ ಗಣೇಶ ಭಟ್ಟ ಉಪ್ಪೋಣಿ ಹೇಳಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡ ಭಾಷೆ ಮಾತ್ರವಲ್ಲ, ಕನ್ನಡಿಗರನ್ನು ಸಹ ತಿರಸ್ಕರಿಸಲಾಗುತ್ತಿದೆ. ಅನ್ಯ ಭಾಷಿಕ ಸಿಬ್ಬಂದಿಯಿಂದ ಕನ್ನಡ ಭಾಷೆ ಮಾತ್ರ ಗೊತ್ತಿರುವ ಗ್ರಾಹಕರಿಗೆ ಬ್ಯಾಂಕ್ಗಳಲ್ಲಿ ವ್ಯವಹರಿಸುವುದು ಕಷ್ಟವಾಗಿದೆ. ಈ ಬಗ್ಗೆ ಗಮನ ಸೆಳೆಯಲು ಜುಲೈ 7ರಿಂದ ಅಭಿಯಾನ ನಡೆಸಲಾಗುತ್ತದೆ. ಶಿರಸಿಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ನ ಪ್ರತಿ ಶಾಖೆಗೆ ತೆರಳಿ, ಅಲ್ಲಿನ ಮಾಹಿತಿ ಫಲಕ, ಚಲನ್, ಇತರ ದೈನಂದಿನ ಅಗತ್ಯಗಳು ಕನ್ನಡದಲ್ಲೇ ಇರುವಂತೆ ಒತ್ತಾಯಿಸಿ, ಪ್ರಬಂಧಕರಿಗೆ ಎಚ್ಚರಿಕೆ ಪತ್ರ ನೀಡಲಾಗುವುದು’ ಎಂದರು.</p>.<p>ಇದಕ್ಕೆ ಸ್ಪಂದನೆ ಸಿಗದಿದ್ದಲ್ಲಿ ಕಾನೂನು ಹೋರಾಟ ಮಡೆಸಲಾಗುತ್ತದೆ. ಕನ್ನಡ ಬಳಕೆ ಕಡ್ಡಾಯಗೊಳಿಸುವ ಕಾರ್ಯದಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಕೈಜೋಡಿಸಬೇಕು ಎಂದು ಹೇಳಿದರು. ಸಂಘಟನೆ ಪ್ರಮುಖರಾದ ಪ್ರಸನ್ನ ನಾಯ್ಕ, ಗಣೇಶ ಕಂಬಾರ, ಮದನ್, ಸುಶೀಲ್ಕುಮಾರ್, ಸಂದೇಶ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>