ಗೇರುಸೊಪ್ಪ ಸೂಳೆಮುರ್ಕಿ ತಿರುವಿನ ಸಮೀಪ ಜುಲೈ 16ರಂದು ಭೂ ಕುಸಿತವಾಗಿತ್ತು. ಬಳಿಕ ಇಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ವರದಿ ನೀಡಿದ್ದರು. ಹೊನ್ನಾವರ ತಹಶೀಲ್ದಾರ್ ಸ್ಥಳ ವರದಿ ನೀಡಿದ್ದನ್ನು ಆಧರಿಸಿ ಭಟ್ಕಳ ಉಪ ವಿಭಾಗಾಧಿಕಾರಿ ಶಿಫಾರಸು ಮಾಡಿದ್ದರು.