‘ಉದ್ದೇಶಿತ ಮಳಿಗೆಯು ಗ್ರಾಮದಲ್ಲಿರುವ ಜನತಾ ವಿದ್ಯಾಲಯ ಪ್ರೌಢಶಾಲೆಯ ಪ್ರವೇಶದ್ವಾರಕ್ಕಿಂತ 110 ಮೀಟರ್ ದೂರದಲ್ಲಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯವರು ಅಳತೆ ಮಾಡಿ ಪ್ರಮಾಣಪತ್ರ ನೀಡಿದ್ದಾರೆ. ಆದರೆ, ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ವಕೀಲ ಆರ್.ಜಿ.ನಾಯ್ಕ, ಮಳಿಗೆ ಸ್ಥಾಪನೆಯನ್ನು ವಿರೋಧಿಸಿದ್ದರು. ಅಲ್ಲದೇ ಅಂತರವು ಕೇವಲ 60 ಮೀಟರ್ ಇದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ’ ಎಂದು ಆರೋಪಿಸಿದರು.