ಮುಂಡಗೋಡ: ತಾಲ್ಲೂಕಿನ ಮುಡಸಾಲಿ ಗ್ರಾಮದ ರೈತ ಫಕ್ಕೀರಪ್ಪ ಅಗಸಿಮನೆ (73) ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆವಿಜೆ ಬ್ಯಾಂಕ್ ಹಾಗೂ ಕಾತೂರ ಸೊಸೈಟಿಯಲ್ಲಿ ಬೆಳೆಗಾಗಿ ಸಾಲ ಮಾಡಿದ್ದರು. ಅದನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.