ನಗರೋತ್ಥಾನ ಯೋಜನೆಯಡಿಯಲ್ಲಿ ಪಟ್ಟಣದ ಬಹುತೇಕ ರಸ್ತೆಗಳನ್ನು ಕಾಂಕ್ರೀಟ್ ಮಾಡಲಾಗಿದೆ. ಆದರೆ, ಈ ರಸ್ತೆಗೆ ಮಾತ್ರ ಡಾಂಬರೀಕರಣ ಮಾಡಲಾಗುತ್ತಿದೆ. ನಗರೋತ್ಥಾನ ಕಾಮಗಾರಿಗಳು ಜಿಲ್ಲಾಮಟ್ಟದ ಗುತ್ತಿಗೆಯಾಗಿದೆ. ಮೂರು ವರ್ಷಗಳ ಹಿಂದೆಯೂ ರಸ್ತೆ ಕಾಮಗಾರಿಗಾಗಿ ಅಗೆದು ಹಾಕಲಾಗಿತ್ತು. ಮೂರು ವರ್ಷಗಳ ನಂತರ ಈಗ ಕಾಮಗಾರಿ ಆರಂಭಿಸಿದ್ದರೂ ಅಪೂರ್ಣವಾಗಿದೆ. 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಅವ್ಯವಸ್ಥೆಯಿಂದ ಜನ ನಡೆದುಕೊಂಡು ಹೋಗಲು, ವಾಹನಗಳಲ್ಲಿ ಸಂಚರಿಸಲು ಬಹಳ ಕಷ್ಟವಾಗುತ್ತಿದೆ.