ಮಹಿಳೆಯರೂ ಸೇರಿದಂತೆ ಮೀನುಗಾರರು ಹಾಗೂ ಸ್ಥಳೀಯರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸ್ಥಳದಲ್ಲಿ ಜಮಾವಣೆಗೊಂಡಿದ್ದ ಪೋಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಕಾಮಗಾರಿಗೆ ಅನುವು ಮಾಡಿಕೊಟ್ಟರು. ಈ ನಡುವೆ ಟೊಂಕದ ನಿವಾಸಿ ಚಿದಂಬರ ತಾಂಡೇಲ ಎನ್ನುವವರು, ತನ್ನ ಬೆನ್ನಿಗೆ ಗಾಯವಾಗುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.