‘ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬಂದರು ನಿರ್ಮಾಣದಿಂದ ಪರಿಸರಕ್ಕೆ ಹಾನಿಯಾಗುವ ಜೊತೆಗೆ ಜನಜೀವನಕ್ಕೆ ಧಕ್ಕೆಯಾಗಲಿದೆ’ ಎಂದು ಪ್ರತಿಭಟನಾಕಾರರು ಕಾಮಗಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯರ ವಿರೋಧದ ಕಾರಣ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಗುತ್ತಿಗೆದಾರ ಕಂಪನಿಗೆ ಸೂಚಿಸಿದರು.