ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಪೌರಾಯುಕ್ತ ಆರ್.ಪಿ.ನಾಯ್ಕ, ನಗರಸಭೆ ಸದಸ್ಯರು ಕೂಡ ಸ್ಥಳಕ್ಕೆ ಬಂದರು. ಈ ಸಂದರ್ಭದಲ್ಲಿ ಕಾಮಗಾರಿಯ ಬಗ್ಗೆ ಸ್ಪಷ್ಟನೆ ನೀಡಿದ ಹೆಸ್ಕಾಂ ಅಧಿಕಾರಿ ಶಂಕರ ಸಿ.ಬಿಂಗಿ, ‘ಕೇಬಲ್ನ ಎರಡೂ ತುದಿಗಳಲ್ಲಿ ಅರ್ಥಿಂಗ್ ವ್ಯವಸ್ಥೆಯಿದೆ. ಮೂರು ಪದರಗಳ ಸುರಕ್ಷಾ ಕವಚವಿದೆ. ಒಂದುವೇಳೆ, ಎಲ್ಲಾದರೂ ವಿದ್ಯುತ್ ಸೋರಿಕೆಯಾದರೆ ಕ್ಷಣ ಮಾತ್ರದಲ್ಲಿ ಸಂಪರ್ಕ ಕಡಿತಗೊಳ್ಳುತ್ತದೆ’ ಎಂದು ಸ್ಪಷ್ಟನೆ ನೀಡಿದರು.