ಕಾರವಾರ: ನಗರದ ಬಿಣಗಾದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಸಂಜೆ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮನೋಜ್ ರೇವಣಕರ್ ಮತ್ತು ಶ್ರುತಿ ಮೃತರು. ಮಹಾರಾಷ್ಟ್ರದ ಕೊಲ್ಲಾಪುರದವರಾದ ಇವರು, ಚೆಂಡಿಯಾದಲ್ಲಿ ನೃತ್ಯ ತರಬೇತಿ ನೀಡುತ್ತ ಅಲ್ಲೇ ವಾಸವಿದ್ದರು. ಮನೋಜ್ ಸ್ಥಳದಲ್ಲೇ ಮೃತಪಟ್ಟರೆ, ಶ್ರುತಿ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮೀಣ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಶೆಟ್ಟಿ ಹಾಗೂ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತ ಸಂಬಂಧ ತನಿಖೆ ಮುಂದುವರಿದಿದೆ.