ತನಿಖೆಯ ವೇಳೆ ಆತ, ತಾನು ಮುಂಬೈನ ಭರತ್ ಭಾಯ್ ಉರುಫ್ ಪಿಂಟು ಎಂಬುವವರ ಜೊತೆ ಕೆಲಸ ಮಾಡುತ್ತಿದ್ದು, ತಿಂಗಳಿಗೆ ₹ 15 ಸಾವಿರ ಕೊಡುತ್ತಾರೆ. ತಾನು ಸಾಗಿಸುವ ಹಣವನ್ನು ಮಂಗಳೂರಿನ ರಾಜು ಎಂಬುವವರಿಗೆ ಕೊಡಬೇಕಿತ್ತು ಎಂದು ತಿಳಿಸಿದ್ದಾಗಿ ರೈಲ್ವೆ ರಕ್ಷಣಾ ಪಡೆಯ ಇನ್ಸ್ಪೆಕ್ಟರ್ ವಿಪಿನ್ ಸಿಂಗ್ ರಾಣಾ ತಿಳಿಸಿದ್ದಾರೆ.