ಆದರೆ ಜು.18ರ ಮಧ್ಯರಾತ್ರಿ ಸಮಯದಲ್ಲಿ ಮನೆಯಲ್ಲಿ ಮಲಗಿದ್ದ ಮನೋಹರ ಏಕಾಏಕಿ ಮಂಚದಿಂದ ಕೆಳಗೆ ಬಿದ್ದಿದ್ದಾರೆ. ಮನೆಯಲ್ಲಿದ್ದ ಅತ್ತೆ, ಮಾವ ಹಾಗೂ ಪತ್ನಿ ಭಯದಿಂದ, ಸ್ಥಳೀಯರನ್ನು ಸಹಾಯಕ್ಕೆ ಕರೆಯಲು ಮುಂದಾದರೂ, ಮಧ್ಯರಾತ್ರಿ ಹಾಗೂ ಕೋವಿಡ್ ಭಯದಿಂದ ಜನರು ಮುಂದೆ ಬಂದಿಲ್ಲ. ತಹಶೀಲ್ದಾರ್ ಶ್ರೀಧರ ಮುಂದಲಮನಿ ಹಾಗೂ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂಗನಬಸಯ್ಯ ಬೆಳಗಿನಜಾವವೇ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಆಗ ತಾಲ್ಲೂಕು ಆಸ್ಪತ್ರೆ ಸಿಬ್ಬಂದಿ ಬಂದು ತಪಾಸಣೆ ಮಾಡಿದಾಗ ಹೃದಯಾಘಾತದಿಂದ ಮನೋಹರ್ ನಿಧರಾಗಿದ್ದಾರೆ ಎಂದು ತಿಳಿದುಬಂದಿದೆ.