<p><strong>ಯಲ್ಲಾಪುರ</strong>: ತಾಲ್ಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಮನೆ ಎಂಬಲ್ಲಿ ಮಂಗಳವಾರ ವಿದ್ಯುತ್ ಸರ್ವಿಸ್ ಲೈನ್ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.</p>.<p>ಪಟ್ಟಣ ವ್ಯಾಪ್ತಿಯ ಸಬಗೇರಿಯ ಆದಂಸಾಬ್ ಇ ಶೇಖ್ (75) ಮೃತಪಟ್ಟವರು. ಅವರು ಉಮ್ಮಚಗಿಯ ಹುಣಸೇಮನೆಯಲ್ಲಿ ಅತಿಕ್ರಮಣ ಜಮೀನಿನಲ್ಲಿರುವ ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸರಿಪಡಿಸಲು ಸಮೀಪದ ವಿದ್ಯುತ್ ಕಂಬವನ್ನು ಏರಿದ್ದರು. ಸರ್ವಿಸ್ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಗಡಿಭಾಗ ತಾಟವಾಳ ಬಳಿ 11 ಕೆ.ವಿ. ವಿದ್ಯುತ್ ತಂತಿಯ ಕಂಬ ಮುರಿದು ರಸ್ತೆಯ ಮೇಲೆ ಬಿದ್ದಿದೆ. ಇದರಿಂದ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಯಲ್ಲಾಪುರ- ಶಿರಸಿ ರಸ್ತೆಯಲ್ಲಿ ಬೇಡ್ತಿ ಬಳಿ ರಾಜ್ಯ ಹೆದ್ದಾರಿಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ವಲ್ಪ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಮನೆ ಎಂಬಲ್ಲಿ ಮಂಗಳವಾರ ವಿದ್ಯುತ್ ಸರ್ವಿಸ್ ಲೈನ್ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ.</p>.<p>ಪಟ್ಟಣ ವ್ಯಾಪ್ತಿಯ ಸಬಗೇರಿಯ ಆದಂಸಾಬ್ ಇ ಶೇಖ್ (75) ಮೃತಪಟ್ಟವರು. ಅವರು ಉಮ್ಮಚಗಿಯ ಹುಣಸೇಮನೆಯಲ್ಲಿ ಅತಿಕ್ರಮಣ ಜಮೀನಿನಲ್ಲಿರುವ ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸರಿಪಡಿಸಲು ಸಮೀಪದ ವಿದ್ಯುತ್ ಕಂಬವನ್ನು ಏರಿದ್ದರು. ಸರ್ವಿಸ್ ಲೈನ್ ಸರಿಪಡಿಸುತ್ತಿದ್ದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಗಡಿಭಾಗ ತಾಟವಾಳ ಬಳಿ 11 ಕೆ.ವಿ. ವಿದ್ಯುತ್ ತಂತಿಯ ಕಂಬ ಮುರಿದು ರಸ್ತೆಯ ಮೇಲೆ ಬಿದ್ದಿದೆ. ಇದರಿಂದ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಯಲ್ಲಾಪುರ- ಶಿರಸಿ ರಸ್ತೆಯಲ್ಲಿ ಬೇಡ್ತಿ ಬಳಿ ರಾಜ್ಯ ಹೆದ್ದಾರಿಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ವಲ್ಪ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>