ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧಿವಾದ ಹೇಳಲು ಹೋಗಿ ಅಣ್ಣನಿಂದಲೇ ಕೊಲೆಯಾದ ತಮ್ಮ

Last Updated 12 ಜುಲೈ 2021, 15:44 IST
ಅಕ್ಷರ ಗಾತ್ರ

ಹೊನ್ನಾವರ: ಪಟ್ಟಣದ ಚರ್ಚ್ ರಸ್ತೆಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಅರ್ಜುನ್ ಶಂಕರ ಮೇಸ್ತ (23) ಕೊಲೆಯಾದ ವ್ಯಕ್ತಿ. ಘಟನೆಗೆ ಸಂಬಂಧಿಸಿದಂತೆ ಕೊಲೆಯಾದ ಅರ್ಜುನ್ ತಾಯಿ, ತಾರಾ ಶಂಕರ ಮೇಸ್ತ ಅವರು ನೀಡಿದ ದೂರು ಆಧರಿಸಿ ಪೊಲೀಸರು ಮೃತನ ಅಣ್ಣ ಕೃಷ್ಣ ಶಂಕರ ಮೇಸ್ತ (25) ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

‘ದುಡಿಯಲು ಹೋಗದೆ ಮನೆಯಲ್ಲೇ ಕಾಲ ಕಳೆಯಬೇಡ ಎಂದು ತಮ್ಮ ಅರ್ಜುನ್ ಬುದ್ಧಿವಾದ ಹೇಳಿದಾಗ ಅಣ್ಣ ಕೃಷ್ಣ ಸಿಟ್ಟಿನಿಂದ, ಕೊಲೆ ಮಾಡುವುದಾಗಿ ತಮ್ಮನಿಗೆ ಹೆದರಿಸುತ್ತಿದ್ದ. ಭಾನುವಾರ ರಾತ್ರಿ ನಾನು ಹೋಟೆಲ್‌ನಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ಕೃಷ್ಣ ಮನೆಗೆ ಬೀಗ ಹಾಕಿ ಎಲ್ಲಿಯೋ ಹೋಗಿದ್ದ. ಫೋನ್ ಮಾಡಿದರೂ ಬರಲಿಲ್ಲ. ಪಕ್ಕದ ಮನೆಯವರೊಬ್ಬರ ಸಹಾಯ ಪಡೆದು ಬೀಗ ಮುರಿದು ಒಳಗೆ ಹೋದಾಗ ಅರ್ಜುನ್ ಕೊಲೆಯಾಗಿರುವುದು ಕಂಡುಬಂತು’ ಎಂದು ಅರ್ಜುನ್ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಪಿ.ಎಸ್.ಐ.ಶಶಿಕುಮಾರ ಸಿ.ಆರ್. ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT