ಇಲ್ಲಿ ಕೃಷಿ ಚಟುವಟಿಕೆಗಳನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡವರೇ ಅಧಿಕ. 2019ರಲ್ಲಿ ಭಾರಿ ಮಳೆ ಸುರಿದು, ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿತ್ತು. ಆಗ ಕೂಡ ಹಲವು ಮನೆಗಳು ಜಲಾವೃತವಾಗಿದ್ದವು. ಈ ವರ್ಷವೂ ಅದೇ ಪರಿಸ್ಥಿತಿ ಉದ್ಭವವಾಗಿದೆ. ಈ ರೀತಿ ವರ್ಷ ವರ್ಷವೂ ಆಗುತ್ತಿದ್ದರೆ ಮುಂದಿನ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂಬ ಆತಂಕ ಸ್ಥಳೀಯರದ್ದಾಗಿದೆ. ತಮಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.