ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಮಾರಿಕಾಂಬಾ ರಥ ನಿರ್ಮಾಣಕ್ಕೆ ಚಾಲನೆ

Last Updated 8 ಮಾರ್ಚ್ 2022, 16:25 IST
ಅಕ್ಷರ ಗಾತ್ರ

ಶಿರಸಿ: ಮಾರಿಕಾಂಬಾ ದೇವಿಯನ್ನು ಜಾತ್ರಾ ಗದ್ದುಗೆಗೆ ಕರೆದೊಯ್ಯುವ ರಥ ನಿರ್ಮಾಣ ಪ್ರಕ್ರಿಯೆ ತಾರಿಮರದ ತುಂಡುಗಳಿಗೆ ಮಂಗಳವಾರ ಪೂಜೆ ಸಲ್ಲಿಸುವುದರೊಂದಿಗೆ ಆರಂಭಗೊಂಡಿತು.

ಮಾ.4 ರಂದು ಎಸಳೆ ಗ್ರಾಮದಲ್ಲಿ ರಥ ನಿರ್ಮಾಣಕ್ಕೆ ಬಳಸುವ ಮರಕ್ಕೆ ಕಚ್ಚು ಹಾಕಿ ತುಂಡರಿಸಲಾಗಿತ್ತು. ಮರದ ತುಂಡುಗಳನ್ನು ಸಂಪ್ರದಾಯಬದ್ಧವಾಗಿ ಬಾಬುದಾರರು ಎತ್ತಿನಬಂಡಿಯ ಮೂಲಕ ಮೆರವಣಿಗೆಯಲ್ಲಿ ಕರೆತಂದರು.

ಸಿಂಗಾರಗೊಂಡಿದ್ದ ಎತ್ತುಗಳು ಬಂಡಿಯಲ್ಲಿ ಇಡಲಾಗಿದ್ದ ಮರದ ತುಂಡುಗಳನ್ನು ಎಳೆದು ತಂದವು. ಅವುಗಳಿಗೆ ದೇವಸ್ಥಾನದ ಎದುರು ಪೂಜೆ ಸಲ್ಲಿಸಲಾಯಿತು. ಬಳಿಕ ಮರವನ್ನು ರಥ ಸಿದ್ಧಪಡಿಸುವ ಸಲುವಾಗಿ ಬಡಗಿಗಳಿಗೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ಧರ್ಮದರ್ಶಿ ಮಂಡಳದ ಅಧ್ಯಕ್ಷ ರವೀಂದ್ರ ಜಿ.ನಾಯ್ಕ, ಉಪಾಧ್ಯಕ್ಷ ಸುಧೀಶ ಜೋಗಳೆಕರ, ಸುಧೀರ ಹಂದ್ರಾಳ, ವತ್ಸಲಾ ಹೆಗಡೆ, ಶಿವಾನಂದ ಶೆಟ್ಟಿ, ಬಾಬುದಾರ ಪ್ರಮುಖರು, ಭಕ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT