ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಕಾಂಬಾ ದೇವಾಲಯ: ಧರ್ಮದರ್ಶಿ ಮಂಡಳಿಗೆ ರವೀಂದ್ರ ನಾಯ್ಕ ಅಧ್ಯಕ್ಷ

Last Updated 20 ಮೇ 2021, 8:24 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ಪ್ರಸಿದ್ಧ ಮಾರಿಕಾಂಬಾ ದೇವಾಲಯದ ನೂತನ ಧರ್ಮದರ್ಶಿ ಮಂಡಳದ ಅಧ್ಯಕ್ಷರಾಗಿ ನಿವೃತ್ತ ಎಸಿಎಫ್ ರವೀಂದ್ರ ಜಿ.ನಾಯ್ಕ, ಉಪಾಧ್ಯಕ್ಷರಾಗಿ ಬಿಎಸ್ಎನ್ಎಲ್ ನಿವೃತ್ತ ಎಂಜಿನಿಯರ್ ಸುದೇಶ ಜೋಗಳೆಕರ್ ಆಯ್ಕೆಯಾದರು. ಮಂಡಳಿಯ ಇತರ ಮೂವರು ಸದಸ್ಯರೊಂದಿಗೆ ದೇವಾಲಯದ ಪ್ರಾಮಗಣದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ದೇವಸ್ಥಾನದ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಸಿ.ರಾಜಶೇಖರ ಆನ್ ಲೈನ್ ಮೂಲಕ ಪ್ರಮಾಣ ವಚನ ಬೋಧಿಸಿದರು. ಮುಂದಿನ ಐದು ವರ್ಷದ ಅವಧಿಗೆ ಧರ್ಮದರ್ಶಿ ಮಂಡಳ ಅಧಿಕಾರ ನಡೆಸಲಿದ್ದು ಸದಸ್ಯರಾಗಿ ಸುಧೀರ ಹಂದ್ರಾಳ, ವತ್ಸಲಾ ಹೆಗಡೆ ಮತ್ತು ವಿಶ್ವನಾಥ ಶೆಟ್ಟಿ ನೇಮಕಗೊಂಡಿದ್ದಾರೆ.

ಪ್ರಮಾಣ ವಚನ ಸಮಾರಂಭದಲ್ಲಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶಾಂತವೀರ ಶಿವಪ್ಪ, ಈ ಹಿಂದಿನ ಆಡಳಿತ ಮಂಡಳಿ ಸದಸ್ಯರು, ಬಾಬುದಾರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT