ಬೆಳಿಗ್ಗೆ 8.30ಕ್ಕೆ ಆರಂಭಗೊಂಡ ಪೂಜಾ ಕಾರ್ಯಕ್ರಮ 10 ಗಂಟೆಯವರೆಗೆ ನಡೆಯಿತು. ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 144ನೇ ಕಲಂ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ, ಧರ್ಮದರ್ಶಿ ಮಂಡಳಿ ಸದಸ್ಯರು, ಕೆಲವೇ ಬಾಬುದಾರರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟೇಶ ನಾಯ್ಕ, ಉಪಾಧ್ಯಕ್ಷ ಮನೋಹರ ಮಲ್ಮನೆ, ಬಾಬುದಾರ ಪ್ರಮುಖ ಜಗದೀಶ ಗೌಡ, ಅಜಯ ನಾಡಿಗ್ ಇತರರು ಇದ್ದರು. ನಿರ್ಬಂಧ ಇದ್ದ ಕಾರಣ ದೇವಾಲಯದ ಬಾಗಿಲನ್ನು ಮುಚ್ಚಲಾಯಿತು.