ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಮಾತನಾಡಿ, ‘ರಾಮಕೃಷ್ಣ ಹೆಗಡೆ ಅವರ ಜನ್ಮ ದಿನಾಚರಣೆಯನ್ನು ಪ್ರತಿವರ್ಷ ಉತ್ಸವದ ಮಾದರಿಯಲ್ಲಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಪ್ರವಾಹದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಹೆಗಡೆ ಅವರ ಜನ್ಮ ದಿನಾಚರಣೆಯನ್ನು ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಇದು ರಾಮಕೃಷ್ಣ ಹೆಗಡೆ ಅವರು ಹುಟ್ಟಿದ ಊರು. ಆದ್ದರಿಂದ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡುವ ಜವಾಬ್ದಾರಿ ನಮಗಿದೆ’ ಎಂದರು.