ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ ಜಿಲ್ಲೆ ರಚನೆಗೆ ವೈಯಕ್ತಿಕ ಅಭ್ಯಂತರವಿಲ್ಲ: ಹೆಬ್ಬಾರ

Last Updated 4 ಅಕ್ಟೋಬರ್ 2021, 15:46 IST
ಅಕ್ಷರ ಗಾತ್ರ

ಶಿರಸಿ: ‘ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸಲು ವೈಯಕ್ತಿಕ ಅಭ್ಯಂತರವಿಲ್ಲ. ಆದರೆ, ಹೊಸ ಜಿಲ್ಲೆ ಇಬ್ಭಾಗಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ಚರ್ಚೆಗೆ ಬಂದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಜಿಲ್ಲೆಯನ್ನು ಇಬ್ಭಾಗಿಸುವ ಮುನ್ನ ಪಕ್ಷಾತೀತವಾಗಿ ವಿವಿಧ ಕ್ಷೇತ್ರಗಳ ಪ್ರಮುಖರ ಜತೆ ಚರ್ಚೆ ನಡೆಸಬೇಕು. ಜನರ ಒಟ್ಟಾರೆ ಅಭಿಪ್ರಾಯ ಸಂಗ್ರಹವಾಗಬೇಕು. ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳ ಜತೆ ನಾನು ಈ ಕುರಿತು ಈವರೆಗೆ ಚರ್ಚಿಸಿಲ್ಲ’ ಎಂದರು.

‘ಜಿಲ್ಲೆಯಲ್ಲಿ ನನಗಿಂತ ಹಿರಿಯ ರಾಜಕಾರಣಿಗಳಿದ್ದಾರೆ. ಹೊಸ ಜಿಲ್ಲೆ ರಚನೆಗೆ ಅವರ ಅಭಿಪ್ರಾಯವೂ ಮುಖ್ಯವಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT