ಗೋಕರ್ಣದ ಗಂಗೆಕೊಳ್ಳದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಬ್ಬರೂ ಹಿರಿಯರು, ಒಂದೇ ಜಿಲ್ಲೆಯವರು. ಏನೇ ಸಮಸ್ಯೆ ಇದ್ದರೂ ಬಗೆಹರಿಸಿಕೊಳ್ಳಲು ಹಲವು ದಾರಿಗಳಿದ್ದವು. ಅದನ್ನು ಬಿಟ್ಟು ಏಕಾಏಕಿ ರಾಜ್ಯಪಾಲರಿಗೆ ದೂರು ನೀಡಿದ ಕ್ರಮ ಸರಿಯಲ್ಲ. ಇದರಿಂದ ಸರ್ಕಾರದ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ. ವಿರೋಧ ಪಕ್ಷದವರಿಗೂ ಸರ್ಕಾರದ ವಿರುದ್ಧ ಮಾತನಾಡಲು ವಿಷಯ ಸಿಕ್ಕಿದ ಹಾಗೆ ಆಗಿದೆ’ ಎಂದರು.