<p><strong>ಕಾರವಾರ</strong>: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ.ಗೇ ಮತ ಹಾಕುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸದಸ್ಯರ ಮೇಲೆ ಒತ್ತಡ ಹೇರಲಾಗುತ್ತಿದ್ದರೆ ಚುನಾವಣಾ ಆಯೋಗದಿಂದ ತನಿಖೆಯಾಗಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ಮುಖಂಡರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಬಿ.ಜೆ.ಪಿ.ಗೆ ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ಭಯದಿಂದ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮಾಡಿಲ್ಲ’ ಎಂಬ ಆರೋಪಕ್ಕೂ ತಿರುಗೇಟು ನೀಡಿ, ‘ಸೋಲಿನ ಭಯ ಇದ್ದಿದ್ದರೆ ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಮಾಡುತ್ತಿರಲಿಲ್ಲ. ಈ ಹಿಂದೆ ತಮಗೆ ಬೇಕಾದ ರೀತಿಯಲ್ಲಿ ಅವೈಜ್ಞಾನಿಕವಾಗಿ ಕ್ಷೇತ್ರ ವಿಂಗಡಣೆ ಮಾಡಿದ್ದರು. ಈ ವಿಚಾರವು ಹೈಕೋರ್ಟ್, ಚುನಾವಣಾ ಆಯೋಗ, ಮುಖ್ಯಮಂತ್ರಿ ಮುಂದೆಯೂ ಇತ್ತು. ಅದನ್ನು ಸರಿಪಡಿಸಲಾಗುತ್ತಿದ್ದು, ಇದರಿಂದಾಗಿ ತಡವಾಗಿದೆ’ ಎಂದರು.</p>.<p>‘ಜಿಲ್ಲೆಯಾದ್ಯಂತ ಬಿ.ಜೆ.ಪಿ.ಗೆ ನಿರೀಕ್ಷೆಗೂ ಮೀರಿದ ಉತ್ತಮ ವಾತಾವರಣವಿದೆ. ನಾವು ಚುನಾವಣೆ ಬಂದಾಗ ಮಾತ್ರ ಸಿದ್ಧತೆ ಮಾಡಿಲ್ಲ. ಈ ಹಿಂದಿನಿಂದಲೂ ಜಾಗೃತರಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ಮೊದಲನೇ ಪ್ರಾಶಸ್ತ್ಯದಲ್ಲೇ ಗಣಪತಿ ಉಳ್ವೇಕರ್ ಗೆಲುವು ಖಂಡಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತ ಇಲ್ಲ. ಸಂಪುಟದ ಪುನರ್ ರಚನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟಿದ್ದಾಗಿದೆ’ ಎಂದರು.</p>.<p>ಶಾಸಕಿ ರೂಪಾಲಿ ನಾಯ್ಕ, ಅಭ್ಯರ್ಥಿ ಗಣಪತಿ ಉಳ್ವೇಕರ್, ಪಕ್ಷದ ಪ್ರಮುಖರಾದ ನಾಗರಾಜ ನಾಯಕ, ಉಷಾ ಹೆಗಡೆ, ನಾಗೇಶ ಕುರ್ಡೇಕರ್, ಭಾಸ್ಕರ ನಾರ್ವೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ.ಗೇ ಮತ ಹಾಕುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸದಸ್ಯರ ಮೇಲೆ ಒತ್ತಡ ಹೇರಲಾಗುತ್ತಿದ್ದರೆ ಚುನಾವಣಾ ಆಯೋಗದಿಂದ ತನಿಖೆಯಾಗಲಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ಮುಖಂಡರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಬಿ.ಜೆ.ಪಿ.ಗೆ ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ಭಯದಿಂದ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮಾಡಿಲ್ಲ’ ಎಂಬ ಆರೋಪಕ್ಕೂ ತಿರುಗೇಟು ನೀಡಿ, ‘ಸೋಲಿನ ಭಯ ಇದ್ದಿದ್ದರೆ ಗ್ರಾಮ ಪಂಚಾಯಿತಿ ಚುನಾವಣೆಯನ್ನೂ ಮಾಡುತ್ತಿರಲಿಲ್ಲ. ಈ ಹಿಂದೆ ತಮಗೆ ಬೇಕಾದ ರೀತಿಯಲ್ಲಿ ಅವೈಜ್ಞಾನಿಕವಾಗಿ ಕ್ಷೇತ್ರ ವಿಂಗಡಣೆ ಮಾಡಿದ್ದರು. ಈ ವಿಚಾರವು ಹೈಕೋರ್ಟ್, ಚುನಾವಣಾ ಆಯೋಗ, ಮುಖ್ಯಮಂತ್ರಿ ಮುಂದೆಯೂ ಇತ್ತು. ಅದನ್ನು ಸರಿಪಡಿಸಲಾಗುತ್ತಿದ್ದು, ಇದರಿಂದಾಗಿ ತಡವಾಗಿದೆ’ ಎಂದರು.</p>.<p>‘ಜಿಲ್ಲೆಯಾದ್ಯಂತ ಬಿ.ಜೆ.ಪಿ.ಗೆ ನಿರೀಕ್ಷೆಗೂ ಮೀರಿದ ಉತ್ತಮ ವಾತಾವರಣವಿದೆ. ನಾವು ಚುನಾವಣೆ ಬಂದಾಗ ಮಾತ್ರ ಸಿದ್ಧತೆ ಮಾಡಿಲ್ಲ. ಈ ಹಿಂದಿನಿಂದಲೂ ಜಾಗೃತರಾಗಿ ಕೆಲಸ ಮಾಡಿದ್ದೇವೆ. ಹಾಗಾಗಿ ಮೊದಲನೇ ಪ್ರಾಶಸ್ತ್ಯದಲ್ಲೇ ಗಣಪತಿ ಉಳ್ವೇಕರ್ ಗೆಲುವು ಖಂಡಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತ ಇಲ್ಲ. ಸಂಪುಟದ ಪುನರ್ ರಚನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟಿದ್ದಾಗಿದೆ’ ಎಂದರು.</p>.<p>ಶಾಸಕಿ ರೂಪಾಲಿ ನಾಯ್ಕ, ಅಭ್ಯರ್ಥಿ ಗಣಪತಿ ಉಳ್ವೇಕರ್, ಪಕ್ಷದ ಪ್ರಮುಖರಾದ ನಾಗರಾಜ ನಾಯಕ, ಉಷಾ ಹೆಗಡೆ, ನಾಗೇಶ ಕುರ್ಡೇಕರ್, ಭಾಸ್ಕರ ನಾರ್ವೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>