ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ರಾಜ್ಯದ ಪ್ರಭಾರಿ ಅರುಣ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ. ಪಕ್ಷದ ಹಿರಿಯರು ಸ್ಪಷ್ಟಪಡಿಸಿರುವ ಕಾರಣ ಆ ಚರ್ಚೆಗೆ ಆಸ್ಪದವಿಲ್ಲ. ಉಳಿದಂತೆ, ಸಂಪುಟ ವಿಸ್ತರಣೆ, ಪುನರ್ ರಚನೆ ಅಥವಾ ಖಾತೆ ಹಂಚಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ತೀರ್ಮಾನಿಸುತ್ತಾರೆ. ನಾವು ಮಂತ್ರಿಗಳಾಗಿ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಿದ್ದೇವೆ’ ಎಂದರು.