ಬೇಲೇಕೇರಿ ಬಂದರಿನಲ್ಲಿ ಅವಶ್ಯಕ ಮೂಲ ಸೌಕರ್ಯಕ್ಕೆ ಅನುದಾನದ ಅವಶ್ಯಕತೆ ಇದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು. ಶಾಸಕಿ ರೂಪಾಲಿ ನಾಯ್ಕ ಬಂದರು ಪ್ರದೇಶಗಳ ಮೀನುಗಾರರ ಸಮಸ್ಯೆಗಳನ್ನು ಸಚಿವರಿಗೆ ತಿಳಿಸಿದರು. ತಹಶೀಲ್ದಾರ್ ಉದಯ ಕುಂಬಾರ, ಬಂದರು ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಕುಮಾರ ಹೆಡೆ, ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿಸೋಜಾ, ಜಗದೀಶ ಖಾರ್ವಿ, ರಾಮದಾಸ ಖಾರ್ವಿ, ಗೌರೀಶ ಖಾರ್ವಿ, ರಾಜು ಖಾರ್ವಿ ಇದ್ದರು.