ಶಿರಸಿ: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಭಾರತಿ ದಂಪತಿ ಪುತ್ರಿ ಜಯಲಕ್ಷ್ಮಿ–ಆದಿತ್ಯ ಅವರ ಮದುವೆ ಆರತಕ್ಷತೆ ಕಾರ್ಯಕ್ರಮವು ಮಂಗಳವಾರ ತಾಲ್ಲೂಕಿನ ಗೋಳಿ ಸಿದ್ಧಿವಿನಾಯಕ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆಯಿತು.
ದೇವಾಲಯದ ಆವರಣದಲ್ಲಿ ಬೃಹತ್ ಶಾಮಿಯಾನ ಹಾಕಿ ಮಧ್ಯಾಹ್ನದ ಭೋಜನ ವ್ಯವಸ್ಥೆಗೊಳಿಸಲಾಗಿತ್ತು. ಮಠಾಧೀಶರು, ಪಕ್ಷದ ಕಾರ್ಯಕರ್ತರು, ಸಹಸ್ರಾರು ಜನರು ಪಾಲ್ಗೊಂಡರು.
ಉಪಮುಖ್ಯಮಂತ್ರಿ ಸಿ.ಎನ್.ಆಶ್ವತ್ಥನಾರಾಯಣ, ಸಚಿವರಾದ ಸುರೇಶಕುಮಾರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ, ಕಾಂಗ್ರೆಸ್ ಮುಖಂಡರಾದ ಕಾಗೋಡು ತಿಮ್ಮಪ್ಪ, ಆರ್.ವಿ.ದೇಶಪಾಂಡೆ, ಯು.ಟಿ.ಖಾದರ್, ಹಲವಾರು ಶಾಸಕರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.