‘ನಕಲಿ’ಗಳ ಹಾವಳಿ:ಜಿಲ್ಲೆಯಲ್ಲಿ ನಕಲಿ ಪತ್ರಗಳು, ಆದೇಶಗಳನ್ನು ಸೃಷ್ಟಿಸುವ ಜಾಲ ಸಕ್ರಿಯವಾಗಿರುವ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಕಳೆದ ವಾರ ಮಳೆ ಜೋರಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಮಳೆ ಕಡಿಮೆಯಾದ ಬಳಿಕ ಪುನಃ ತರಗತಿಗಳು ಆರಂಭವಾಗುವ ಬಗ್ಗೆ ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ, ಅದನ್ನೂ ತಿದ್ದಿದ್ದ ಕಿಡಿಗೇಡಿಗಳು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮಾರ್ಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಇದು ಸಾಕಷ್ಟು ಗೊಂದಲಗಳಿಗೆ ಕಾರಣವಾಗಿತ್ತು.