ಮಳೆಗಾಲದಲ್ಲಿ ಭತ್ತ ಬೆಳೆಯುವ ಅವರು, ಬೇಸಿಗೆಯಲ್ಲಿ ಕಾಯಿಪಲ್ಲೆ, ಪಾಲಕ್, ಹರಿವೆ ಮುಂತಾದ ಸೊಪ್ಪಿನ ಗಿಡಗಳನ್ನು ಕೃಷಿ ಮಾಡುತ್ತಾರೆ. ಕಾರವಾರದ ಮಾರುಕಟ್ಟೆಗೆ ಅದನ್ನು ಮಾರಾಟ ಮಾಡಿ ಬಂದ ಆದಾಯದಿಂದಲೇ ಜೀವನ ಸಾಗಿಸುತ್ತಾರೆ. ಗಿರಿಧರ ಎಂಟನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಅವರು ಮೂರು ವರ್ಷದ ಬಾಲಕನಾಗಿದ್ದಾಗ ಕೀಲೂತ ಸಮಸ್ಯೆ ಕಾಣಿಸಿಕೊಂಡಿತ್ತು. ನಿರಂತರ ಚಿಕಿತ್ಸೆ ಪಡೆದ ಪರಿಣಾಮ ಈಗ ಅವರು ಹೊಲದಲ್ಲಿ ಉಳುಮೆ ಮಾಡುವಷ್ಟು ಮತ್ತು ಸೈಕಲ್ ಸವಾರಿ ಮಾಡುವಷ್ಟು ಚೇತರಿಸಿಕೊಂಡಿದ್ದಾರೆ.