‘ನಿರಾಶ್ರಿತರಿಗೆ ಕದ್ರಾ ಪುನರ್ವಸತಿ ಕೇಂದ್ರದಲ್ಲಿ ಮನೆಗಳನ್ನು ನೀಡಲಾಗಿದೆ. ಆದರೆ, ಆ ಜಾಗವು ನಿರಾಶ್ರಿತರ ಹಕ್ಕಿಗೆ ಇನ್ನೂ ಒಳಪಟ್ಟಿಲ್ಲ. ಉದ್ಯೋಗದ ಭರವಸೆಯೂ ಈಡೇರಿಲ್ಲ. ಈ ರೀತಿಯ ಹಲವು ಸಮಸ್ಯೆಗಳನ್ನು ನಿರಾಶ್ರಿತರು ಅನುಭವಿಸುತ್ತಿದ್ದಾರೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.