ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ರಾಜೇಶ್ ನಾಯ್ಕ, ಜಗದೀಶ ಬಿರ್ಕೋಡಿಕರ್, ಅರುಣ ಸಾಳುಂಕೆ, ಉಪನ್ಯಾಸಕರು ಇದ್ದರು. ಬಳಿಕ, ನಗರದ ಶಾಸಕರ ಮಾದರಿ ಶಾಲೆ, ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿದ ಅವರು, ‘ನಗರದ ಕೇಂದ್ರ ಭಾಗದಲ್ಲಿರುವ ಸರ್ಕಾರಿ ಶಾಲೆ ಅಭಿವೃದ್ಧಿ ಮುಖ್ಯ. ಕಟ್ಟಡಗಳು ಹಳೆಯದಾಗಿದ್ದು, ಹೊಸದಾಗಿ ನಿರ್ಮಾಣ ಮಾಡಬೇಕಿದೆ’ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹರೀಶ ಗಾಂವ್ಕರ್ ಹಾಗೂ ಇತರ ಅಧಿಕಾರಿಗಳಿದ್ದರು.