ಸಚಿವರನ್ನು ಗುರುವಾರ ‘ಸೀಬರ್ಡ್’ ನೌಕಾನೆಲೆಯಲ್ಲಿ ಭೇಟಿ ಮಾಡಿದ ಅವರು, ‘ಕಾರವಾರ ಹಾಗೂ ಅಂಕೋಲಾ ತಾಲ್ಲೂಕುಗಳ 4,604 ಕುಟುಂಬಗಳು ನೌಕಾನೆಲೆಯಿಂದ ನಿರಾಶ್ರಿತವಾಗಿವೆ. ಕೇವಲ 968 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ. ದೇಶಕ್ಕಾಗಿ ಸರ್ವಸ್ವನ್ನೂ ತ್ಯಾಗ ಮಾಡಿರುವ ಸಂತ್ರಸ್ತರು ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರ್ಪಡೆಯಾಗಬೇಕು. ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು.