<p><strong>ಕಾರವಾರ</strong>: ‘ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನೀಡುವ ಪರಿಹಾರದಲ್ಲಿ ಯಾವುದೇ ಅನ್ಯಾಯವಾಗಬಾರದು. ಫಲಾನುಭವಿಗಳಿಗೆ ಪರಿಹಾರ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ಕದ್ರಾ, ಕದ್ರಾ ಪುನರ್ವಸತಿ ಕೇಂದ್ರ, ಮಲ್ಲಾಪುರ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಕೆರವಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>‘ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮನೆ ಕಳೆದುಕೊಂಡವರಿಗೆ ಸ್ವಂತ ಜಾಗ ಇಲ್ಲದಿದ್ದರೆ, ಅಂತಹವರಿಗೆ ಸರ್ಕಾರದಿಂದ ಜಾಗ ನೀಡಲಾಗುವುದು. ₹ 5 ಲಕ್ಷದಲ್ಲಿ ವಸತಿ ಸೌಲಭ್ಯ ನೀಡಲಾಗುವುದು. ಇದಕ್ಕೆ ಒಪ್ಪುವುದಾದರೆ ಮುಂದಿನ ಪ್ರಕ್ರಿಯೆ ಮಾಡಲಾಗುವುದು’ ಎಂದು ಆಶ್ವಾಸನೆ ನೀಡಿದರು.</p>.<p>‘ಪುನರ್ವಸತಿಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎತ್ತರದ ಪ್ರದೇಶದಲ್ಲಿರುವ ಜಾಗಗಳನ್ನು ಗುರುತಿಸಿ ಮಾಹಿತಿ ನೀಡಬೇಕು. ಒಂದು ವೇಳೆ ಜನರು ಬರಲು ಇಚ್ಛಿಸಿದರೆ ಅವರ ಮಾಹಿತಿ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಕದ್ರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬು ನಾಯ್ಕ, ಸದಸ್ಯರು, ಡಿ.ವೈ.ಎಸ್.ಪಿ ಅರವಿಂದ ಕಲಗುಜ್ಜಿ, ತಹಶೀಲ್ದಾರ್ ನಿಶ್ಚಲ್ ನರೋನಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಆನಂದಕುಮಾರ್ ಇದ್ದರು.</p>.<p>ಕದ್ರಾ ಕಾಳಜಿ ಕೇಂದ್ರದಲ್ಲಿ ರೂಪಾಲಿ ಅವರು ಸಂತ್ರಸ್ತ ಮಹಿಳೆಯರಿಗೆ ಸೀರೆ, ಹೊದಿಕೆ, ಮುಖಗವಸು, ಸಾಬೂನು, ಟೂತ್ಪೇಸ್ಟ್ಗಳನ್ನು ವಿತರಿಸಿದರು.</p>.<p class="Subhead">ಕೆ.ಪಿ.ಸಿ ಅಧಿಕಾರಿಗಳಿಗೆ ಎಚ್ಚರಿಕೆ:</p>.<p>‘ಪ್ರವಾಹ ಸಂಭವಿಸಿದ ಕ್ಷಣದಿಂದ ಈವರೆಗೆ ಕೆ.ಪಿ.ಸಿ ಅಧಿಕಾರಿಗಳು ಯಾವುದೇ ರೀತಿಯ ಸಹಕಾರ ನೀಡಿಲ್ಲ. ಕೆ.ಪಿ.ಸಿ ವಸತಿ ಸಮುಚ್ಛಯಗಳು ಬಳಕೆಯಾಗದೇ ಖಾಲಿ ಉಳಿದಿವೆ. ಅವುಗಳಲ್ಲಿ ನಿರಾಶ್ರಿತರಿಗೆ ಉಳಿಯಲು ಅವಕಾಶ ಮಾಡಿಕೊಡಲು ಕೇಳಿದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದು ಸಂತ್ರಸ್ತರು ಅಳಲು ತೋಡಿಕೊಂಡರು.</p>.<p>‘ಪ್ರವಾಹ ಬಂದಾಗಲೆಲ್ಲ ಇಲ್ಲಿಯ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಾದರೂ ಅಧಿಕಾರಿಗಳು ಬರಬೇಕಿತ್ತು. ಇಂತಹ ವರ್ತನೆ ಮಾಡಬಾರದು. ಖಾಲಿ ಇರುವ ವಸತಿಗೃಹಗಳನ್ನು ಸಂತ್ರಸ್ತರಿಗೆ ಕೂಡಲೇ ನೀಡಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕಿ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನೀಡುವ ಪರಿಹಾರದಲ್ಲಿ ಯಾವುದೇ ಅನ್ಯಾಯವಾಗಬಾರದು. ಫಲಾನುಭವಿಗಳಿಗೆ ಪರಿಹಾರ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ಕದ್ರಾ, ಕದ್ರಾ ಪುನರ್ವಸತಿ ಕೇಂದ್ರ, ಮಲ್ಲಾಪುರ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಕೆರವಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>‘ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮನೆ ಕಳೆದುಕೊಂಡವರಿಗೆ ಸ್ವಂತ ಜಾಗ ಇಲ್ಲದಿದ್ದರೆ, ಅಂತಹವರಿಗೆ ಸರ್ಕಾರದಿಂದ ಜಾಗ ನೀಡಲಾಗುವುದು. ₹ 5 ಲಕ್ಷದಲ್ಲಿ ವಸತಿ ಸೌಲಭ್ಯ ನೀಡಲಾಗುವುದು. ಇದಕ್ಕೆ ಒಪ್ಪುವುದಾದರೆ ಮುಂದಿನ ಪ್ರಕ್ರಿಯೆ ಮಾಡಲಾಗುವುದು’ ಎಂದು ಆಶ್ವಾಸನೆ ನೀಡಿದರು.</p>.<p>‘ಪುನರ್ವಸತಿಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎತ್ತರದ ಪ್ರದೇಶದಲ್ಲಿರುವ ಜಾಗಗಳನ್ನು ಗುರುತಿಸಿ ಮಾಹಿತಿ ನೀಡಬೇಕು. ಒಂದು ವೇಳೆ ಜನರು ಬರಲು ಇಚ್ಛಿಸಿದರೆ ಅವರ ಮಾಹಿತಿ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಕದ್ರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬು ನಾಯ್ಕ, ಸದಸ್ಯರು, ಡಿ.ವೈ.ಎಸ್.ಪಿ ಅರವಿಂದ ಕಲಗುಜ್ಜಿ, ತಹಶೀಲ್ದಾರ್ ನಿಶ್ಚಲ್ ನರೋನಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಆನಂದಕುಮಾರ್ ಇದ್ದರು.</p>.<p>ಕದ್ರಾ ಕಾಳಜಿ ಕೇಂದ್ರದಲ್ಲಿ ರೂಪಾಲಿ ಅವರು ಸಂತ್ರಸ್ತ ಮಹಿಳೆಯರಿಗೆ ಸೀರೆ, ಹೊದಿಕೆ, ಮುಖಗವಸು, ಸಾಬೂನು, ಟೂತ್ಪೇಸ್ಟ್ಗಳನ್ನು ವಿತರಿಸಿದರು.</p>.<p class="Subhead">ಕೆ.ಪಿ.ಸಿ ಅಧಿಕಾರಿಗಳಿಗೆ ಎಚ್ಚರಿಕೆ:</p>.<p>‘ಪ್ರವಾಹ ಸಂಭವಿಸಿದ ಕ್ಷಣದಿಂದ ಈವರೆಗೆ ಕೆ.ಪಿ.ಸಿ ಅಧಿಕಾರಿಗಳು ಯಾವುದೇ ರೀತಿಯ ಸಹಕಾರ ನೀಡಿಲ್ಲ. ಕೆ.ಪಿ.ಸಿ ವಸತಿ ಸಮುಚ್ಛಯಗಳು ಬಳಕೆಯಾಗದೇ ಖಾಲಿ ಉಳಿದಿವೆ. ಅವುಗಳಲ್ಲಿ ನಿರಾಶ್ರಿತರಿಗೆ ಉಳಿಯಲು ಅವಕಾಶ ಮಾಡಿಕೊಡಲು ಕೇಳಿದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದು ಸಂತ್ರಸ್ತರು ಅಳಲು ತೋಡಿಕೊಂಡರು.</p>.<p>‘ಪ್ರವಾಹ ಬಂದಾಗಲೆಲ್ಲ ಇಲ್ಲಿಯ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಾದರೂ ಅಧಿಕಾರಿಗಳು ಬರಬೇಕಿತ್ತು. ಇಂತಹ ವರ್ತನೆ ಮಾಡಬಾರದು. ಖಾಲಿ ಇರುವ ವಸತಿಗೃಹಗಳನ್ನು ಸಂತ್ರಸ್ತರಿಗೆ ಕೂಡಲೇ ನೀಡಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕಿ ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>