ಬೇಡ್ತಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಯಲ್ಲಾಪುರ ಮತ್ತು ಶಿರಸಿ ತಾಲ್ಲೂಕಿನ ಹಳ್ಳಿಗಳಲ್ಲಿ ನಿರಂತರವಾಗಿ ಸಭೆ ನಡೆಯುತ್ತಿದೆ. ತಾಲ್ಲೂಕಿನ ತಟ್ಟೀಸರ, ಸಾಲ್ಕಣಿ, ವಾನಳ್ಳಿ, ಜಡ್ಡಿಗದ್ದೆ, ಯಲ್ಲಾಪುರದ ಉಮ್ಮಚಗಿ, ಹುಣಸೆಟ್ಟಿಕೊಪ್ಪ, ಇನ್ನಿತರ ಪ್ರದೇಶದಲ್ಲಿ ಸರಣಿ ಸಭೆಗಳು ನಡೆದಿವೆ. ಸಭೆಯಲ್ಲಿ ಪಟ್ಟಣದ ಹೊಳೆ ಶಾಲ್ಮಲಾ, ಬೇಡ್ತಿ ನದಿಗಳಿಗೆ ಅಣೆಕಟ್ಟು ನಿರ್ಮಾಣ, ನದಿ ತಿರುಗಿಸುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.