ಈ ವೇಳೆ ಮಾತನಾಡಿದ ಮೊಗೇರ ಸಮಾಜದ ಅಧ್ಯಕ್ಷ ಕೆ.ಎಂ.ಕರ್ಕಿ, ‘2008ಕ್ಕೂ ಮೊದಲು, ನಮ್ಮ ಸಮಾಜಕ್ಕೆ ಪರಿಶಿಷ್ಟ ಜಾತಿಯ ಸಿಂಧುತ್ವ ಪ್ರಮಾಣಪತ್ರ ನೀಡಲಾಗುತ್ತಿತ್ತು. ಆದರೆ, ಇದನ್ನು ಅಧಿಕಾರಿಗಳು ಮುಂದುವರಿಸಲಿಲ್ಲ. ಈ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್,ಸಿಂಧುತ್ವ ಪ್ರಮಾಣಪತ್ರವನ್ನು ರದ್ದು ಮಾಡುವ ಅಧಿಕಾರ ಯಾವುದೇ ಅಧಿಕಾರಿಗಳಿಗಿಲ್ಲ ಎಂದು ಹೇಳಿತ್ತು’ ಎಂದು ತಿಳಿಸಿದರು.