ಇಲ್ಲಿನ ಹೊಸಗದ್ದೆಯ ಬಿ.ಜೆ.ಪಿ ಬೂತ್ ಘಟಕದ ಅಧ್ಯಕ್ಷ ಸೋಮೇಶ್ವರ ಗೌಡ ಅವರ ಮನೆಯಲ್ಲಿ ನಾಮಫಲಕ ಅಂಟಿಸಿ ಮಾತನಾಡಿದ ಅವರು, ‘ದೇಶದಲ್ಲಿ ಅವಶ್ಯಕ ಪ್ರಮಾಣಕ್ಕಿಂತ ಅಧಿಕ ಆಹಾರೋತ್ಪಾದನೆ ಆಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದೇಶದ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಹೆಚ್ಚಿಸಲು ರೈತರಿಗೆ ತರಬೇತಿ ಮತ್ತು ಮಾಹಿತಿ ಅವಶ್ಯಕತೆ ಇದೆ. ಕೃಷಿ ವಲಯದಲ್ಲಿ ಇಂದಿಗೂ ಹಲವು ಸಮಸ್ಯೆಗಳಿವೆ. ರೈತರ ಆದಾಯ ದ್ವಿಗುಣಗೊಳಿಸಲು ಅಗತ್ಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಆಹಾರ ಸಂಸ್ಕರಣೆ ಮತ್ತು ಸಂಗ್ರಹಣೆ ಸುಧಾರಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಅವರು ಹೇಳಿದರು.